ಜಾತಿಗಣತಿ ಬಿಡುಗಡೆಯಿಂದ ಎಲ್ಲರಿಗೂ ನ್ಯಾಯ ಸಿಗುತ್ತೆ: ಯತೀಂದ್ರ ಸಿದ್ದರಾಮಯ್ಯ

0
Spread the love

ಮೈಸೂರು: ಜಾತಿಗಣತಿ ಬಿಡುಗಡೆಯಿಂದ ಎಲ್ಲರಿಗೂ ನ್ಯಾಯ ಸಿಗುತ್ತೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ, ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿಗಣತಿ ಮುಂದೆ ತಂದಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಕುರ್ಚಿಗೆ ಯಾವುದೇ ಅಪಾಯ ಬಂದಿಲ್ಲ. ಅಪಾಯವೇ ಇಲ್ಲ ಅಂದ ಮೇಲೆ ಯಾಕೆ ಈ ಮಾತು.

Advertisement

ಇದೆಲ್ಲ ಮಾಡೋ ವ್ಯಕ್ತಿ ಅಲ್ಲ. ಸಿದ್ದರಾಮಯ್ಯ ಹಿಂದೆ ಹೈಕಮಾಂಡ್ ಇದೆ. ಯಾವ ಬದಲಾವಣೆಯೂ ಆಗಲ್ಲ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಜಾತಿಗಣತಿ ಬಿಡುಗಡೆ ಮಾಡೋದಾಗಿ ಹೇಳಿದ್ದೆವು.

ಅದರಂತೆ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ಜಾತಿಗಣತಿ ವಿಚಾರವಾಗಿ ಧ್ವನಿ ಎತ್ತಿದ್ದಾರೆ. ಕೊಟ್ಟ ಭರವಸೆ ಈಡೇರಿಸುವುದು ನಮ್ಮ ಕರ್ತವ್ಯ. ಜಾತಿಗಣತಿ ಬಿಡುಗಡೆಯಿಂದ ಎಲ್ಲರಿಗೂ ನ್ಯಾಯ ಸಿಗುತ್ತೆ. ಜನಸಂಖ್ಯಾ ಆಧಾರದ ಮೇಲೆ ಮೀಸಲಾತಿ ಹೆಚ್ಚು ಸಿಗುತ್ತದೆ ಎಂದು ಮೈಸೂರಿನಲ್ಲಿ ಹೇಳಿದರು.


Spread the love

LEAVE A REPLY

Please enter your comment!
Please enter your name here