ಬೆಂಗಳೂರು:- ಆಡಳಿತ ಪಕ್ಷ ಇಂದು ಭ್ರಷ್ಟಾಚಾರ ಕೂಪದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು, ಗ್ಯಾರಂಟಿ ಹೆಸರೇಳಿ ಅಭಿವೃದ್ಧಿ ಕಾರ್ಯ ಮರೆತಿದೆ. ಸಿಎಂ ಮಾತೆತ್ತಿದ್ರೆ ಅಹಿಂದ ಅಹಿಂದ ಅಂತಾರೆ. ಆದರೆ ಯಾವುದೇ ಹಿಂದುಳಿದವರ ಪರ ಕೆಲಸ ಮಾಡ್ತಿಲ್ಲ. ಬಿಜೆಪಿ ಮುಸ್ಲಿಂ ವಿರೋಧಿ ಅಂತಾರೆ. ಮುಸ್ಲಿಂ ವಿರೋಧಿಗಳಾಗಿದ್ರೆ ತಲಾಕ್ ಬಿಲ್ ತರ್ತಿರಲಿಲ್ಲ, ಕಲಾಂ ಅವರನ್ನು ರಾಷ್ಟ್ರಪತಿ ಮಾಡ್ತಿರಲಿಲ್ಲ, ನಸೀರ್ ಸಾಬ್ ಅಂಧ್ರದ ರಾಷ್ಟ್ರಪತಿ ಮಾಡ್ತಿರಲಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.
ಇನ್ನೂ ನಾನು ಯಡಿಯೂರಪ್ಪ ಮಗ ಅಂತಾರೆ. ನನಗೆ ಅದರ ದುರಹಂಕಾರವಿಲ್ಲ, ಹೆಮ್ಮೆ ಇದೆ. ನಾನೂ ಒಬ್ಬ ಬಿಜೆಪಿ ಕಾರ್ಯಕರ್ತ ಅನ್ನೋ ಹೆಮ್ಮೆ ಇದೆ ಎಂದರು. ಇದೇ ವೇಳೆ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಉಲ್ಲೇಖವಾಗಿರುವ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗದ ವಿಚಾರಕ್ಕೆ ಕಿಡಿಕಾರಿದರು. ಅಧಿಕಾರದ ದರ್ಪದಿಂದ ಕಾಂಗ್ತೆಸ್ನವ್ರು ಹೇಳಿಕೆ ಕೊಡ್ತಿದ್ದಾರೆ. ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ ಅದೊಂದು ಕೊಲೆ ಎಂದು ಆರೋಪಿಸಿದರು.
ಇದರ ಹಿಂದೆ ಯಾರೆಲ್ಲ ದುಷ್ಟ ಶಕ್ತಿಗಳು ಇವೆ ಅಂತ ಎಲ್ಲರಿಗೂ ಗೊತ್ತಿದೆ. ಅವರಿಗೆ ಶಿಕ್ಷೆ ಆಗಲೇಬೇಕು. ನಾವು ಕಾನೂನು ಹೋರಾಟ ಮಾಡ್ತೇವೆ. ಇವತ್ತು ಕಾನೂನು ತಜ್ಞರ ಜೊತೆ ಮುಂದಿನ ಹೋರಾಟ ಬಗ್ಗೆ ಚರ್ಚೆ ಮಾಡ್ತೇನೆ ಎಂದು ತಿಳಿಸಿದರು.