ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಚಾಕುವಿನಿಂದ ಇರಿದ ಕಿರಾತಕರು.!

0
Spread the love

ಬೆಂಗಳೂರು:  ನಾಯಿ ಬೊಗಳಿದ್ದಕ್ಕೆ ನಾಯಿಯ ಮಾಲೀಕನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ದೇವನಹಳ್ಳಿಯ ದೊಡ್ಡಚೀಮನಹಳ್ಳಿಯಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ಮಧುಕುಮಾರ್ (34) ಎಂದು ಗುರುತಿಸಲಾಗಿದೆ. ಚಾಕು ಇರಿತದ ರಭಸಕ್ಕೆ ಚಾಕುವಿನ ತುದಿ ಮುರಿದು ದೇಹದೊಳಗೆ ಉಳಿದುಕೊಂಡಿದೆ. ಆತನನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Advertisement

ನಮ್ಮನ್ನು ನೋಡಿ ನಿಮ್ಮ ನಾಯಿ ಬೊಗಳುತ್ತಿದೆ ಅದಕ್ಕೆ ಬುದ್ದಿ ಹೇಳಲು ಆಗಲ್ವಾ? ಎಂದು ಅದೇ ಗ್ರಾಮದ ಸುನೀಲ್, ಅನೀಲ್, ದೇವರಾಜ್ ಹಾಗೂ ಅಜಯ್ ಎಂಬವರು ಮಧುಕುಮಾರ್ ಬಳಿ ಗಲಾಟೆ ಆರಂಭಿಸಿದ್ದಾರೆ. ಬಳಿಕ ಗಲಾಟೆ ತಾರಕಕ್ಕೇರಿ ನಾಲ್ವರು ಸೇರಿ ಚಾಕುವಿನಿಂದ ಇರಿದಿದ್ದಾರೆ. ಅಲ್ಲದೇ ಆತನ ಪತ್ನಿ ಮಮತಾ ಮೇಲೂ ಹಲ್ಲೆ ನಡೆಸಿದ್ದಾರೆ. ಕೃತ್ಯದ ಬಳಿಕ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ಸಂಬಂಧ ವಿಶ್ವನಾಥಪುರ ಪೊಲೀಸ್ (Police) ಠಾಣೆಯಲ್ಲಿ ಐಪಿಸಿ ಸೆಕ್ಷನ್ 307ರ ಅಡಿ ಕೊಲೆ ಯತ್ನ, 504, 506ರ ಅಡಿ ಸಾರ್ವಜನಿಕ ಸ್ಥಳದಲ್ಲಿ ನಿಂದನೆ, 354, 324ರ ಅಡಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಸೇರಿದಂತೆ ಇನ್ನಿತರೆ ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಾಗಿದೆ


Spread the love

LEAVE A REPLY

Please enter your comment!
Please enter your name here