ಬೆಂಗಳೂರು:– ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಸಾಕಷ್ಟು ಮಂದಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಈ ಅವಘಡದಲ್ಲಿ ಪರಿಸರಕ್ಕೂ ಹಾನಿ ಆಗಿದ್ದು, ಇದೀಗ ದೂರು ದಾಖಲಾಗಿದೆ. ಘಟನೆಯಿಂದ ಕಬ್ಬನ್ ಪಾರ್ಕ್ನ ಗಿಡ, ಮರಗಳಿಗೂ ಹಾನಿ ಉಂಟಾಗಿದೆ. ಹೀಗಾಗಿ ಕಬ್ಬನ್ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಉಮೇಶ್ರಿಂದ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಆರ್ಸಿಬಿ ಐಪಿಎಲ್ನಲ್ಲಿ ಕಪ್ ಗೆಲ್ಲುವ ಮೂಲಕ ಕನ್ನಡಿಗರ 18 ವರ್ಷದ ಕನಸು ನನಸಾಗಿತ್ತು. ಇದೇ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತದಿಂದ 11 ಜನ ಅಮಾಯಕರು ಪ್ರಾಣ ತೆತ್ತರು. ಆದರೆ ವಿಧಾನಸೌಧ ಹಾಗೂ ಹೈಕೋರ್ಟ್ ಮುಂಭಾಗದಲ್ಲಿ ಸೇರಿದ ಭಾರಿ ಜನರ ದಟ್ಟಣೆಯಿಂದಾಗಿ ಬ್ಯಾರಿಕೇಡ್ಗಳು, ನೆಲಮಟ್ಟದ ಗಿಡಗಳನ್ನು ಅಥವಾ ಆರ್ನಮೆಂಟಲ್ ಪ್ಲಾಂಟ್ಸ್ಗಳನ್ನು ಜನ ತುಳಿದು ಹಾಕಿದ್ದಾರೆ. ಇದರಿಂದಾಗಿ ಗಿಡಗಳೆಲ್ಲಾ ಮುರಿದು ಒಣಗಿ ಹೋಗಿ ಸರ್ವನಾಶವಾಗಿವೆ.
ಕೇವಲ ವಿಧಾನಸೌಧ ಮುಂಭಾಗದ ಗಿಡಗಳಿಗೆ ಮಾತ್ರ ಹಾನಿಯಾಗಿಲ್ಲ. ಎದುರುಗಡೆ ಇರುವ ಕಬ್ಬನ್ ಪಾರ್ಕ್ನ ಗೇಟ್ನ್ನು ಹಾರಿ ಜನ ಬಂದಿದ್ದರು. ಜೊತೆಗೆ ಪ್ರಾಣವನ್ನು ಲೆಕ್ಕಿಸದೇ ಮರವೇರಿ ಕುಳಿತ್ತಿದ್ದರು. ಇದರಿಂದ ಸಾಕಷ್ಟು ಮರಗಳಿಗೂ ಡ್ಯಾಮೇಜ್ ಉಂಟಾಗಿದೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರ್ಸಿಬಿ, ಕೆಎಸ್ ಸಿಎ, ಡಿಎನ್ಎ ವಿರುದ್ದ ಸಿಡಿ ಸಾಕ್ಷಿ ಸಮೇತ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.