ಬೆಂಗಳೂರು:– ಸೆ.22ಕ್ಕೆ ನಿಗದಿಯಾಗಿದ್ದ PSI ನೇಮಕಾತಿ ಪರೀಕ್ಷೆ ಮುಂದೂಡಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪಿಎಸ್ಐ ನೇಮಕಾತಿಗೆ ಕ್ರಮ ತೆಗೆದುಕೊಂಡಿದ್ದೇವೆ. ಮೊದಲ ಹಂತದ 545 ಜನ ಪಿಎಸ್ಐ ಹಗರಣ ಆಗಿತ್ತು. ಅದಕ್ಕೆ ಸಂಬಂಧ ಪಟ್ಟಂತೆ ರೀ ಎಕ್ಸಾಂ ಮಾಡಿದ್ವಿ. ಅದರ ಫಲಿತಾಂಶವನ್ನು ಅಂತಿಮಗೊಳಿಸಿದ್ದೇವೆ. ಆದೇಶ ಕೊಡುವ ಹಂತದಲ್ಲಿ ಇದ್ದೇವೆ. 402 ಪಿಎಸ್ಐ ಹುದ್ದೆಗಾಗಿ ಮತ್ತೆ ನೇಮಕಾತಿ ಮಾಡಬೇಕಾಗಿದೆ.
22 ಸೆಪ್ಟೆಂಬರ್ ಗೆ ಪರೀಕ್ಷೆ ಮಾಡಲು ತೀರ್ಮಾನಿಸಿದ್ವಿ. ಬಹಳ ಜನ ಪರೀಕ್ಷಾರ್ಥಿಗಳು 22 ರಂದು ಬೇಡ ಮುಂದೂಡುವಂತೆ ಮನವಿ ಮಾಡಿದ್ರು. ಯುಪಿಎಸ್ಸಿ ಪರೀಕ್ಷೆ ಕೂಡ 22ಕ್ಕೆ ಇದೆ. ನಮ್ಮ ರಾಜ್ಯದಿಂದ 100ಕ್ಕೂ ಹೆಚ್ಚು ಜನ ಪ್ರಿಲಿಮ್ಸ್ ಪಾಸ್ ಮಾಡಿದ್ದಾರೆ. ಅವರಿಗೆ ಅವಕಾಶ ತಪ್ಪಿಹೋಗಬಾರದು. ಹಾಗಾಗಿ ಮುಂದೂಡಲು ಹೇಳಿದ್ರು. ಬಿಜೆಪಿ ನವರು ಕೂಡ ಮನವಿ ಮಾಡಿದ್ರು. ನಾವು ಪರಿಶೀಲನೆ ಮಾಡಿ, ಚರ್ಚೆ ನಡೆಸಿದ್ದೇವೆ.
ಡಿಸಂಬರ್ ವರೆಗೆ ಯಾವುದೇ ಸ್ಲಾಟ್ ಇಲ್ಲ ಅಂತ ಕೆಇಇ ಅವರು ಹೇಳಿದ್ದಾರೆ. ಹಿರಿಯ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇವೆ. ಮಧು ಬಂಗಾರಪ್ಪ ಜೊತೆಗೂ ಮಾತನಾಡಿದ್ದೆ. ಡಿಸೆಂಬರ್ ವರೆಗೆ ಎಲ್ಲಾ ಭಾನುವಾರ ಪರೀಕ್ಷೆ ನಿಗಧಿಯಾಗಿದೆ. ಶನಿವಾರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. 28ನೇ ತಾರೀಖು ಈ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. 22 ರಿಂದ 28 ಕ್ಕೆ ಪಿಎಸ್ಐ ಪರೀಕ್ಷೆ ಮುಂದೂಡಲಾಗಿದೆ ಎಂದು ತಿಳಿಸಿದರು.