ಬೆಂಗಳೂರು: ಟೊಮ್ಯಾಟೋ ಬೆಳೆ ನಷ್ಟವಾಗಿದ್ದಕ್ಕೆ ಲ್ಯಾಪ್ ಟ್ಯಾಪ್ ಕಳ್ಳತನ ಮಾಡಿದ್ದ ಟೆಕ್ಕಿಯನ್ನು ವೈಟ್ ಫೀಲ್ಡ್ ಪೊಲೀಸರು ಕಾರ್ಯಾಚರಣೆ ಬಂಧಿಸಿದ್ದಾರೆ. ಮುರುಗೇಶ ಬಂಧಿತ ಆರೋಪಿಯಾಗಿದ್ದು, ಹೊಸೂರಿನಲ್ಲಿ ಸಾಲ ಮಾಡಿ ಆರು ಎಕರೆಯಲ್ಲಿ ಟೊಮ್ಯಾಟೋ ಬೆಳೆದಿದ್ದ. ಆದರೆ ಬೆಳೆ ಕೈಕೊಟ್ಟ ಹಿನ್ನೆಲೆ ಸಾಕಷ್ಟು ನಷ್ಟವಾಗಿತ್ತು. ಸಾಲ ತೀರಿಸಲು ತಾನು ಕೆಲಸ ಮಾಡುತ್ತಿದ್ದ ಐಟಿಪಿಎಲ್ ಕಂಪನಿಯಲ್ಲಿ ಲ್ಯಾಪ್ ಟ್ಯಾಪ್ ಕಳ್ಳತನ ಮಾಡಿದ್ದ.
ಕಳೆದ ಆರು ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದ ಆರೋಪಿ ಲ್ಯಾಪ್ ಟಾಪ್ ಸರ್ವಿಸ್, ರಿಪೇರಿ ಮಾಡುವ ನೆಪದಲ್ಲಿ ಸಾಕಷ್ಟು ಲ್ಯಾಪ್ ಟ್ಯಾಪ್ ಕದ್ದಿದ್ದ. ಈ ಬಗ್ಗೆ ಕಂಪನಿಯವರು ಪ್ರಶ್ನೆ ಮಾಡಿದಾಗ ರಜೆ ಹಾಕಿ ಎಸ್ಕೇಪ್ ಆಗಿದ್ದ. ಕದ್ದ ಲ್ಯಾಪ್ ಟ್ಯಾಪ್ ಗಳನ್ನು ಹೊಸೂರಿನಲ್ಲಿ ಮಾರಾಟ ಮಾಡಿದ್ದ. ಬಂಧಿತನಿಂದ 22 ಲಕ್ಷ ಮೌಲ್ಯದ 50 ಲ್ಯಾಪ್ ಟ್ಯಾಪ್ ಸೀಜ್ ಮಾಡಲಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.