ಜಗಳ ತಡೆಯಲು ಬಂದ ಪೊಲೀಸರ ವಾಹನವನ್ನೇ ಕದ್ದ ಕಿಲಾಡಿ..!

0
Spread the love

ತುಮಕೂರು: ಪೊಲೀಸರ 112 ವಾಹನವನ್ನೆ ಓಡಿಸಿಕೊಂಡು ಪರಾರಿಯಾದ ವ್ಯಕ್ತಿಯನ್ನು ಸಿನಿಮಾ ಸ್ಟೈಲಿ‌ನಲ್ಲಿ ಚೇಸ್ ಮಾಡಿ ಪತ್ತೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ.

Advertisement

ತಡರಾತ್ರಿ ಗ್ರಾಮದ ಸಿಎಸ್ ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಹೋದರಿಬ್ಬರ ನಡುವೆ ಗಲಾಟೆ ಆಗ್ತಿತ್ತು. ಈ ವೇಳೆ ಆರೋಪಿ ಸಹೋದರ 112 ಗೆ ಕರೆ ಮಾಡಿದ್ದರಿಂದ ಗ್ರಾಮಕ್ಕೆ ವಾಹನ ಬಂದಿತ್ತು.

ಈ ವೇಳೆ ಆರೋಪಿ ಹಿಂದೆ ಇದ್ದ 112 ಕಾರಿನ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ಇದನ್ನ ಗಮನಿಸಲು 112 ಚಾಲಕ ಹಿಂದೆ ಬಂದಿದ್ದಾನೆ.

ಈ ವೇಳೆ ಮುಂದೆ ಹೋಗಿ ಕಾರು ತೆಗೆದುಕೊಂಡು ಆರೋಪಿ ಎಸ್ಕೇಪ್‌ ಆಗಿದ್ದಾನೆ. ಸತತ ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿ ಆರೋಪಿಯನ್ನೂ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತುಮಕೂರು ತಾಲೂಕಿನ ಹೆಬ್ಬೂರು ಬಳಿ ವಾಹನ ಪತ್ತೆಯಾಗಿದ್ದು, ಆರೋಪಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here