ರೇಣುಕಾಸ್ವಾಮಿ ಪ್ರಕರಣ: ಮೂವರಿಗೆ ಜಾಮೀನು ಸಿಕ್ಕರೂ ಜೈಲಿನಿಂದ ಇಲ್ಲ ಬಿಡುಗಡೆ ಭಾಗ್ಯ!

0
Spread the love

ರೇಣುಕಾಸ್ವಾಮಿ ಕೊಲೆ ಕೇಸ್​ನ ತನಿಖೆ ಮುಕ್ತಾಯ ಆಗಿದೆ. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಪವನ್ ಸೇರಿದಂತೆ ಹಲವರ ಮೇಲೆ ಗಂಭೀರ ಆರೋಪಗಳು ಎದುರಾಗಿವೆ. ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತೀವ್ರ ತನಿಖೆ ಮಾಡಿದ್ದಾರೆ. ತನಿಖೆ ಅಂತ್ಯವಾಗಿದ್ದು, ಇತ್ತೀಚೆಗೆ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. ಆ ಬಳಿಕ ಜಾಮೀನು ಪಡೆಯುಲು ಆರೋಪಿಗಳು ಅರ್ಜಿ ಸಲ್ಲಿಸಿದರು. ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್​ ಹಾಗೂ ನಿಖಿಲ್​ಗೆ ಈ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿದೆ.

Advertisement

ಆರೋಪಿಗಳಿಗೆ ಸೆಪ್ಟೆಂಬರ್ 23 ರಂದು ಜಾಮೀನು ಸಿಕ್ಕರೂ ಜೈಲಿನಿಂದ ಇನ್ನು ಬಿಡುಗಡೆ ಆಗಿರಲಿಲ್ಲ. ಇದಕ್ಕೆ ಮೂಲ ಕಾರಣ ನ್ಯಾಯಾಲಯದ ಆದೇಶ ಪ್ರತಿಯು ತುಮಕೂರು ಕಾರಾಗೃಹದ ಜೈಲು ಅಧಿಕಾರಿಗಳನ್ನ ತಲುಪಿಲ್ಲ. ಹೀಗಾಗಿ ಮೂವರು ಇನ್ನು ಜೈಲಿನಲ್ಲೇ ಇದ್ದಾರೆ.

ಮೂವರು ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ ಆಗುವುದು ಬಹುತೇಕ ಅನುಮಾನವಾಗಿದೆ. ಹೀಗಾಗಿ ಎಲ್ಲ ಪ್ರಕ್ರಿಯೆ ಮುಗಿಸಿ ಬಿಡುಗಡೆ ಆಗಬೇಕಿದೆ. ಸದ್ಯ ನಾಲ್ವರು ಆರೋಪಿಗಳ ಪೈಕಿ ಮೂವರಿಗೆ ಮಾತ್ರ ಜಾಮೀನು ನೀಡಲಾಗಿದೆ. ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್​​ನಿಂದ ಬೇಲ್ ಸಿಕ್ಕರೇ, ಎ15 ಆರೋಪಿ ಕಾರ್ತಿಕ್ ಹಾಗೂ ಎ17 ಆರೋಪಿ ನಿಖಿಲ್​ಗೆ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.


Spread the love

LEAVE A REPLY

Please enter your comment!
Please enter your name here