ನವದೆಹಲಿ: ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಮಹಾ ಕುಂಭಮೇಳದ ಯಶಸ್ಸಿಗೆ ಅನೇಕ ಜನರು ಕೊಡುಗೆ ನೀಡಿದ್ದಾರೆ. ನಾನು ಎಲ್ಲಾ ಕರ್ಮಯೋಗಿಗಳನ್ನು ಅಭಿನಂದಿಸುತ್ತೇನೆ. ದೇಶಾದ್ಯಂತ ಭಕ್ತರಿಗೆ,
ಉತ್ತರ ಪ್ರದೇಶದ ಜನರಿಗೆ ಮತ್ತು ವಿಶೇಷವಾಗಿ ಪ್ರಯಾಗ್ರಾಜ್ನ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಜನರು ಅನುಕೂಲತೆ ಹಾಗೂ ಅನಾನುಕೂಲತೆಯ ಬಗ್ಗೆ ಚಿಂತಿಸದೆ ಮಹಾ ಕುಂಭಮೇಳದಲ್ಲಿ ಭಾಗವಹಿಸಿದರು. ಈ ಮೂಲಕ ನಮ್ಮ ಸಂಪ್ರದಾಯಗಳನ್ನು ಪೀಳಿಗೆಯಿಂದ ಪೀಳಿಗೆಗೆ ವರ್ಗಾಯಿಸುವ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದರು.
ಇಂದು ಭಾರತದ ಯುವಕರು ಅದರ ಸಂಪ್ರದಾಯ, ನಂಬಿಕೆ ಮತ್ತು ಪದ್ಧತಿಗಳನ್ನು ಹೆಮ್ಮೆಯಿಂದ ಅಳವಡಿಸಿಕೊಳ್ಳುತ್ತಿದ್ದಾರೆ. ಒಂದು ದೇಶವಾಗಿ ನಾವು ದೊಡ್ಡ ಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಗಳಿಸಿದ್ದೇವೆ. ತನ್ನ ಪರಂಪರೆಯೊಂದಿಗೆ ಸಂಪರ್ಕ ಸಾಧಿಸುವ ಸಂಪ್ರದಾಯವು ಇಂದಿನ ಭಾರತದ ದೊಡ್ಡ ಆಸ್ತಿಯಾಗಿದೆ. ಯುವ ಪೀಳಿಗೆ ಕೂಡ ಮಹಾ ಕುಂಭಮೇಳದಲ್ಲಿ ಪೂರ್ಣ ಭಾವನೆಯಿಂದ ಭಾಗವಹಿಸಿದೆ ಎಂದರು.