ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲಾಘನೀಯ: ಶಾಸಕ ಡಾ. ಚಂದ್ರು ಲಮಾಣಿ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮತಕ್ಷೇತ್ರದ ಜನತೆಯ ಒಳಿತಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯಗಳು ಶ್ಲಾಘನೀಯವಾಗಿದ್ದು, ಸಂಸ್ಥೆಯಅನೇಕ ಸಮಾಜಮುಖಿ ಕಾರ್ಯಗಳಿಂದ ಜನತೆಗೆ ಅನುಕೂಲವಾಗಿವೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

Advertisement

ಅವರು ಶನಿವಾರ ಶಿರಹಟ್ಟಿಯ ಶ್ರೀ ಮಹರ್ಷಿ ವಾಲ್ಮೀಕಿ ಸಮಯದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಶಿರಹಟ್ಟಿ/ ಲಕ್ಮೇಶ್ವರ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ವತಿಯಿಂದ ಈಗಾಗಲೇ ಮತಕ್ಷೇತ್ರದಲ್ಲಿ ಹಲವಾರು ದೇವಸ್ಥಾನಗಳ ಅಭಿವೃದ್ಧಿ ಮಾಡಲಾಗಿದೆ. ಕೆರೆಗಳ ಅಭಿವೃದ್ಧಿ, ನಿರ್ಗತಿಕರಿಗೆ ಮನೆ ಕಟ್ಟಿಕೊಡುವಂತಹ ಕೆಲಸಗಳು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದ್ದು, ನಮ್ಮ ಭಾಗದಲ್ಲಿ ಬಹುತೇಕ ಕುಟುಂಬಗಳು ಸ್ವಾವಲಂಬಿ ಬದುಕನ್ನು ಸಾಗಿಸಲು ಅವರಿಗೆ ಆರ್ಥಿಕವಾಗಿ ಸಹಾಯ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಸ್ತನ ಕ್ಯಾನ್ಸರ್‌ನಂತಹ ರೋಗಗಳಿಗೆ ತುತ್ತಾಗುತ್ತಿದ್ದು, ಈ ಬಗ್ಗೆ ಯಾವುದೇ ಮುಜುಗರಕ್ಕೆ ಒಳಗಾಗಬಾರದು. ತಜ್ಞರ ಹತ್ತಿರ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಈ ಬಗ್ಗೆ ವಿದ್ಯಾವಂತ ಮಹಿಳೆಯರು ಹೆಚ್ಚಿನ ಜಾಗೃತಿ ಮಾಡಬೇಕು ಎಂದರು.

ಬಿಪಿ/ಶುಗರ್ ಇದ್ದವರು ಸಮರ್ಪಕ ಆಹಾರ ಪದ್ಧತಿಯನ್ನು ಪಾಲನೆ ಮಾಡಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಿ. ಒತ್ತಡದಲ್ಲಿ ಕೆಲಸ ಮಾಡಬಾರದು. ಇದಕ್ಕಾಗಿ ಅಗತ್ಯ ವ್ಯಾಯಾಮ ಮತ್ತು ಯೋಗವನ್ನು ಮಾಡಬೇಕು. 22 ವರ್ಷಕ್ಕೆಲ್ಲಾ ಹೃದಯ ಸಂಬAಧಿ ಕಾಯಿಲೆಗಳಿಂದ ಮೃತಪಡುತ್ತಿರುವುದು ವಿಷಾದನೀಯ. ಆದ್ದರಿಂದ ತಾಯಂದಿರು ತಮ್ಮ ಮಕ್ಕಳ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಯಾವುದೇ ಕಾರಣಕ್ಕೂ ಸಂಬಂಧಗಳಲ್ಲಿ ಮದುವೆ ಮಾಡಲು ಮುಂದಾಬೇಡಿ. ಇದರಿಂದ ಬುದ್ಧಿಮಾಂದ್ಯ ಮಕ್ಕಳು ಹುಟ್ಟುತ್ತಿದ್ದಾರೆ. ಇಂತಹುದಕ್ಕೆ ಅವಕಾಶವನ್ನು ಕಲ್ಪಿಸಬಾರದು. ಪ್ರತಿಯೊಬ್ಬರೂ ಶೌಚಾಲಯ ನಿರ್ಮಿಸಿಕೊಳ್ಳಿ, ಬಯಲು ಬಹಿರ್ದೆಸೆ ಮುಕ್ತಗೊಳಿಸಿ ಎಂದು ಹೇಳಿದರು.

ಪ.ಪಂ ಅಧ್ಯಕ್ಷೆ ದೇವಕ್ಕ ಗುಡಿಮನಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನಿರ್ದೆಶಕ ಯೋಗೀಶ ಎ, ಮಹಾಂತೇಶ ದಶಮನಿ, ಫಕ್ಕೀರೇಶ ರಟ್ಟಿಹಳ್ಳಿ, ಅಶೋಕ ವರವಿ, ಕೆ.ಎ. ಬಳಿಗೇರ, ದೀಪಾ ಬಿಂಕದಕಟ್ಟಿ, ಕ್ಷೇತ್ರ ಯೋಜನಾಧಿಕಾರಿ ಪುನೀತ ಓಲೇಕರ, ಮಮತಾ ಎಸ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಶಿವಪ್ರಕಾಶ ಮಹಾಜನಶೆಟ್ಟರ ಮಾತನಾಡಿ, ಸರಕಾರ ಮಾಡುವ ಬಹುತೇಕ ಕೆಲಸಗಳನ್ನು ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಮಾಡುತ್ತಾ ಬಂದಿದ್ದು, ಗ್ರಾಮೀಣ ಭಾಗದ ಜನತೆಯ ಬದುಕನ್ನು ಹಸನುಗೊಳಿಸುವುದಕ್ಕಾಗಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕೆಲಸ ನಿರಂತರವಾಗಿ ನಡೆಯುತ್ತಾ ಬಂದಿದೆ. ಮಹಿಳಾ ವಿಚಾರಗೋಷ್ಠಿಯು ಮುಂದಿನ ದಿನಗಳಲ್ಲಿ ಮಹಿಳೆಯರು ಮತ್ತು ತಜ್ಞರೊಂದಿಗೆ ಮುಕ್ತವಾಗಿ ಅವರ ಸಮಸ್ಯೆಗಳನ್ನು ಹಂಚಿಕೊಳ್ಳುವುದಕ್ಕೆ ಸಂವಾದ ಕಾರ್ಯಕ್ರಮ ಏರ್ಪಡಿಸುವಂತೆ ಸಂಸ್ಥೆಯ ಸಿಬ್ಬಂದಿಗೆ ಸೂಚಿಸಿದರು.


Spread the love

LEAVE A REPLY

Please enter your comment!
Please enter your name here