ದೇವಸ್ಥಾನದಲ್ಲಿ ಮತ್ತೆ ಕಳ್ಳತನ.! ಹುಂಡಿ ಹೊತ್ತೊಯ್ದ ಕಳ್ಳರು

0
Spread the love

ಮಂಡ್ಯ: ಕಳ್ಳರು ದೇವಸ್ಥಾನದ ಬೀಗ ಹೊಡೆದು ಹುಂಡಿ ಹೊತ್ತೊಯ್ದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ನಡೆದಿದೆ.  ಒಂದೇ ತಿಂಗಳಲ್ಲಿ ಒಂದೇ ದೇವಸ್ಥಾನದಲ್ಲಿ ಎರಡು ಬಾರಿ ಕಳ್ಳತನ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನ ನಡೆದಿದ್ದು ಹುಂಡಿಯಲ್ಲಿದ್ದ ಹಣ ದೋಚಿ ಹುಂಡಿ ಬಿಸಾಕಿ ಕಳ್ಳರು ಪರಾರಿಯಾಗಿದ್ದಾರೆ. ಈ ದೇವಸ್ಥಾನ ಮಳವಳ್ಳಿಯ- ಬೆಂಗಳೂರು ರಸ್ತೆಯಲ್ಲಿ ಬರುತ್ತದೆ.

Advertisement

ತಡರಾತ್ರಿ ದೇವಸ್ಥಾನದ ಬೀಗ ಹೊಡೆದು ಒಳನುಗ್ಗಿ ಹುಂಡಿ ತೆಗೆದುಕೊಂಡು ಪರಾರಿಯಾಗಿದ್ದಾರೆ. ಮೊದಲಿಗೆ ಬೀಗ ಹೊಡೆದು ದೇವಸ್ಥಾನಕ್ಕೆ ನುಗ್ಗಿದ ಖದೀಮರು ದೇವಸ್ಥಾನದ ಫ್ಯೂಸ್ ಕಿತ್ತು, ದೊಣ್ಣೆಯಲ್ಲಿ ಬಲ್ಪ್ ಗಳನ್ನ ಹೊಡೆದು ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here