ಸಿದ್ದರಾಮಯ್ಯರನ್ನ ಗಡಿಪಾರು ಮಾಡಲು ಸಾಕಷ್ಟು ಅವಕಾಶಗಳಿವೆ: ಸ್ನೇಹಮಯಿ ಕೃಷ್ಣ

0
Spread the love

ಮೈಸೂರು: ಸಿದ್ದರಾಮಯ್ಯರನ್ನ ಗಡಿಪಾರು ಮಾಡಲು ಸಾಕಷ್ಟು ಅವಕಾಶಗಳಿವೆ ಎಂದು ಸ್ನೇಹಮಯಿ ಕೃಷ್ಣ  ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಕಾನೂನುಬದ್ಧವಾದ ಹೋರಾಟ ಮಾಡುತ್ತಿದ್ದೇನೆ. ಸಮಾಜಕ್ಕೆ ನ್ಯಾಯ ಕೊಡಿಸಲು ನಾನು ಹೋರಾಡುತ್ತಿದ್ದೇನೆ.

Advertisement

ನನ್ನ ಗಡಿಪಾರು ಮಾಡಲು ಅವಕಾಶವಿಲ್ಲ. ಸಿದ್ದರಾಮಯ್ಯರನ್ನ ಗಡಿಪಾರು ಮಾಡಲು ಸಾಕಷ್ಟು ಅವಕಾಶಗಳಿವೆ. ಸುಳ್ಳು ಭಾಷಣ ಮಾಡಿ ರಾಜ್ಯದ ಜನರನ್ನ ಪ್ರಚೋದಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಸಮಾಜದ ಶಾಂತಿ ಹಾಳು ಮಾಡುತ್ತಿದ್ದಾರೆ. ಹೋರಾಟ ಮಾಡಬೇಕು ಎಂದು ಅವರು ಕರೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ‘ಸ್ನಹಮಯಿ ಕೃಷ್ಣ ರೌಡಿಶೀಟರ್, ಆತನ ವಿರುದ್ಧ 44 ಕೇಸ್​​ಗಳಿವೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ದಾಖಲೆ ಬಿಡುಗಡೆ ಮಾಡುತ್ತಿದ್ದಾನೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿದ್ದಾನೆ’ ಎಂದು ಲಕ್ಷ್ಮಣ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಸ್ನೇಹಮಯಿ ಕೃಷ್ಣನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದರು.


Spread the love

LEAVE A REPLY

Please enter your comment!
Please enter your name here