ಚಿಕ್ಕಮಗಳೂರು:- ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಸಿಟಿ ರವಿ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಮೃತದೇಹಗಳಿಗಾಗಿ ಉತ್ಖನನ ನಡೆಯುತ್ತಿದೆ. ಪ್ರಾಮಾಣಿಕವಾಗಿ-ಪಾರದರ್ಶಕವಾಗಿ ತನಿಖೆಯಾಗಬೇಕು. ತನಿಖೆಗೆ ಮೊದಲೇ ಆಧಾರ ಇಲ್ಲದೆ ಅಪರಾಧಿ ಸ್ಥಾನದಲ್ಲಿ ನಿಲ್ಲಿಸೋಕೆ ಯಾರಿಗೂ ಅಧಿಕಾರವಿಲ್ಲ ಎಂದಿದ್ದಾರೆ.
ಎಸ್ಡಿಪಿಐ ಕಮ್ಯುನಲ್ ಟ್ರ್ಯಾಕ್ ರೆಕಾರ್ಡ್ ಸಂಘಟನೆ ಅದು ಧರ್ಮಸ್ಥಳದ ವಿರುದ್ಧ ಹೋರಾಡುತ್ತಿದೆ. ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ದೊಡ್ಡ ಷಡ್ಯಂತ್ರವೇ ನಡೆದಿದೆ. ನಾವು ವೀರೇಂದ್ರ ಹೆಗ್ಗಡೆಯವರನ್ನು ದೇವತಾ ಮನುಷ್ಯ ಎಂದು ಭಾವಿಸಿದ್ದೇವೆ. ಪರೋಪಕಾರ ಜೀವನದ ಅವರ ಬದುಕಿಗೆ ಅಷ್ಟು ಅರ್ಥವಿದೆ. ಅವರಿಂದ ಎಷ್ಟೋ ಕುಟುಂಬಗಳು ಬದುಕು ಕಟ್ಟಿಕೊಂಡಿವೆ ಎಂದಿದ್ದಾರೆ.
ಕೊಲೆ, ಆತ್ಮಹತ್ಯೆ, ಅಪರಿಚಿತ ಶವ ಇದರ ಬಗ್ಗೆ ತನಿಖೆಯಾಗಲಿ. ತಪ್ಪು ಯಾರು ಮಾಡಿದ್ರೂ ತಪ್ಪೇ, ಆದರೆ ಈ ಪ್ರಕರಣದಲ್ಲಿ ಷಡ್ಯಂತ್ರ ನಡೆಯುತ್ತಿದೆ. ಇದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.