ಬೆಂಗಳೂರು: ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮತ್ತು ರಸ್ತೆ ಮಾಡಿದ್ದ ಕಂಪನಿ ಐಆರ್ಬಿ ಕಂಪನಿ ಮೇಲೆ ಒತ್ತಡ ತಂದು 8-10 ಜೆಸಿಬಿ, ಇಟಾಚಿ ರಸ್ತೆ ಕ್ಲಿಯರ್ ಮಾಡೋ ಕೆಲಸ ಮಾಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
Advertisement
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುತೇಕ ರಸ್ತೆ ಕ್ಲಿಯರ್ ಮಾಡುವ ಕೆಲಸ ಆಗಿದೆ.
ರಸ್ತೆ ಕ್ಲಿಯರ್ ಆದ ಮೇಲೆ ಸಂಚಾರಕ್ಕೆ ಬಿಡಬೇಕಾ ಅಂತ ಪೊಲೀಸ್ ಮತ್ತು ನ್ಯಾಷನಲ್ ಹೈವೇ ಅವರು ತೀರ್ಮಾನ ಮಾಡ್ತಾರೆ. ಗುಡ್ಡ ಇನ್ನು ತೇವಾಂಶ ಇರುವುದರಿಂದ ಮತ್ತೆ ಗುಡ್ಡ ಕುಸಿಯುವ ಸಾಧ್ಯತೆ ಇದೆ. ಸೇಫ್ಟಿ ಎಂಜಿನಿಯರ್ ಗಳು ಪರಿಶೀಲನೆ ಮಾಡಿದ ಮೇಲೆ ಅ ಬಗ್ಗೆ ತೀರ್ಮಾನ ಮಾಡ್ತೀವಿ. ಕುಸಿತ ಅಗಿರುವ ಜಾಗದಲ್ಲಿ ಕ್ಲೀಯರ್ ಮಾಡೋ ಕೆಲಸ ಆಗ್ತಿದೆ ಅಂತ ಮಾಹಿತಿ ನೀಡಿದರು.