HomeKarnataka Newsನಾಗೇಂದ್ರ ವಿರುದ್ಧ ಹಣ ಪಡೆದಿರುವುದಕ್ಕೆ ಸಾಕ್ಷ್ಯವಿಲ್ಲ, ಬಿಜೆಪಿ ರಾಜಕೀಯ ಮಾಡುತ್ತಿದೆ: ಪರಮೇಶ್ವರ್ ಆರೋಪ

ನಾಗೇಂದ್ರ ವಿರುದ್ಧ ಹಣ ಪಡೆದಿರುವುದಕ್ಕೆ ಸಾಕ್ಷ್ಯವಿಲ್ಲ, ಬಿಜೆಪಿ ರಾಜಕೀಯ ಮಾಡುತ್ತಿದೆ: ಪರಮೇಶ್ವರ್ ಆರೋಪ

For Dai;y Updates Join Our whatsapp Group

ಮೈಸೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಖಂಡಿತವಾಗಿಯೂ ಪಕ್ಷಕ್ಕೆ ಮುಜುಗರ ತಂದಿದೆ ಎಂದು ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು. ಮೈಸೂರಿಗೆ ಹೆಚ್ಚಿನ ಕಾರ್ಖಾನೆಗಳನ್ನು ತರುವ ಉದ್ದೇಶದಿಂದ ಕೆಐಡಿಬಿ ಭೂಮಿಗೆ ನೋಟಿಫಿಕೇಶನ್ ನೀಡಿರಬಹುದು ಎಂದು ಹೇಳಿದ ಪರಮೇಶ್ವರ್,

ಈ ವಿಚಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನೋಡಿಕೊಳ್ಳುತ್ತಾರೆ, ಕೈಗಾರಿಕಾ ಸಚಿವರು ಮತ್ತು ಜಿಲ್ಲಾ ಮಂತ್ರಿಗಳೇ ಇದನ್ನು ನಿರ್ವಹಿಸುತ್ತಾರೆ ಎಂದು ತಿಳಿಸಿದರು. ನಾಗೇಂದ್ರ ರಾಜೀನಾಮೆ ಪಕ್ಷಕ್ಕೆ ಖಂಡಿತ ಮುಜುಗರ ತಂದಿದೆ ಎಂದ ಪರಮೇಶ್ವರ್, ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿದೆ ಎಂದು ಆರೋಪಿಸಿದರು.

ಎರಡು ಬಾರಿ ರಾಜೀನಾಮೆ ಕೊಡಿಸುವ ಮೂಲಕ ಬಿಜೆಪಿ ರಾಜಕೀಯ ನಡೆಸಿದೆ ಎಂದ ಅವರು, ಪಕ್ಷದ ಶಿಸ್ತಿನ ಸಿಪಾಯಿಯಾಗಿರುವ ನಾಗೇಂದ್ರ ಪಕ್ಷಕ್ಕೆ ಮುಜುಗರವಾಗಬಾರದೆಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆಯೇ ಹೊರತು, ರಾಜೀನಾಮೆ ನೀಡುವ ಅಗತ್ಯವೇ ಇರಲಿಲ್ಲ ಎಂದು ಸಮರ್ಥಿಸಿಕೊಂಡರು. ಇಡಿ ಹಾಗೂ ಸಿಬಿಐ ತನಿಖೆಗಳಲ್ಲಿ ನಾಗೇಂದ್ರ ಹೆಸರಿನ ಉಲ್ಲೇಖವಿಲ್ಲ ಎಂದೂ, ಅವರು ಹಣ ಪಡೆದಿರುವ ಬಗ್ಗೆಯೂ ಯಾವುದೇ ಸಾಕ್ಷ್ಯಾಧಾರವಿಲ್ಲ ಎಂದೂ ಪರಮೇಶ್ವರ್ ಸ್ಪಷ್ಟಪಡಿಸಿದರು.

ತಾವು ಗೃಹ ಸಚಿವರಾಗಿದ್ದಾಗಲೇ ಶೇ. 79ರಷ್ಟು ಹಣ ರಿಕವರಿಯಾಗಿತ್ತು ಎಂದು ಹೇಳಿದ ಅವರು, ಈಗ 5 ಕೋಟಿ ರೂ. ರಿಕವರಿ ಪ್ರಕ್ರಿಯೆಯಲ್ಲಿದ್ದು, ಇದರಲ್ಲೂ ನಾಗೇಂದ್ರ ಹೆಸರು ಇಲ್ಲ ಎಂದರು. ಮುಂದಿನ ದಿನಗಳಲ್ಲಿ ವಸ್ತುಸ್ಥಿತಿಯನ್ನು ಜನರ ಮುಂದೆ ತೆರೆದಿಡುವುದಾಗಿ ತಿಳಿಸಿದ ಪರಮೇಶ್ವರ್, ಸದನದಲ್ಲಿ ಈ ಪ್ರಶ್ನೆ ಕೇಳುವಂತೆ ಸೂಚಿಸಿದರೂ ಬಿಜೆಪಿಯವರು ಕೇಳಲಿಲ್ಲ, ಅವರು ಬರೀ ರಾಜಕೀಯ ಮಾಡುತ್ತಿದ್ದಾರೆ ಅಷ್ಟೇ ಎಂದು ಟೀಕಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img