ಬೆಂಗಳೂರು: ಸಿಎಂ ಮನೆಯಲ್ಲೇ ನಕ್ಸಲರು ಶರಣಾಗತಿ ಆಗುತ್ತದೆ ಅಂದ್ರೆ ಅದಕ್ಕಿಂತ ದೊಡ್ಡ ದುರಂತ ಯಾವುದು ಇಲ್ಲ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
Advertisement
ರಾಮೇಶ್ವರ ಕಫೆಗೆ ಬಾಂಬ್ ಇಟ್ಟವರನ್ನು ಹಾಗೂ ಪೊಲೀಸ್ ಸ್ಟೇಷನ್ ಗೆ ಬೆಂಕಿ ಇಟ್ಟವರನ್ನ ಶರಣಾಗತಿ ಆದರೆ ಬಿಡ್ತಾರಾ? ಶರಣಾಗತಿಗೂ ಮೊದಲೇ ಎ, ಬಿ,ಸಿ ಎಂದು ಪ್ಯಾಕೇಜ್ ಘೋಷಣೆ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯನವರ ಮನೆಯಲ್ಲೇ ಶರಣಾಗತಿ ಆಗುತ್ತದೆ ಅಂದ್ರೆ ಅದಕ್ಕಿಂತ ದೊಡ್ಡ ದುರಂತ ಯಾವುದು ಇಲ್ಲ ಎಂದು ಹೇಳಿದರು.
ನಕ್ಸಲ್ ಶರಣಾಗತಿ ಮಾಡುವಂತಹ ಘಟನೆ ಅತ್ಯಂತ ಆತಂಕಕಾರಿ. ನಕ್ಸಲ್ ಅವರನ್ನು ಶರಣಾಗತಿ ಮಾಡಿಸುವ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಬೇಕು. ಮುಂದಿನ ದಿನಗಳಲ್ಲಿ ನಾಗರಿಕ ಸಮಾಜ ಅತ್ಯಂತ ಅಪಾಯಕಾರಿಗೆ ತಲುಪಲಿದೆ ಎಂದು ಹೇಳಿದರು.