ಬೆಂಗಳೂರು: ಯಲಹಂಕದ ಕೋಗಿಲು ಬಡಾವಣೆಯಲ್ಲಿ ನಡೆದ ಅಕ್ರಮ ಮನೆಗಳ ತೆರವು ವಿಚಾರವಾಗಿ ಕೇರಳ ಮತ್ತು ಪಾಕಿಸ್ತಾನ ಮೂಗು ತೂರಿಸಿರೋದಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಗರಂ ಆಗಿದ್ದಾರೆ.
ಎಸ್, ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ತೆರವುಗೊಳಿಸಿದ ಕ್ರಮದ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿದ್ದು, ಈ ವಿಷಯದಲ್ಲಿ ಕೇರಳ ಹಾಗೂ ಪಾಕಿಸ್ತಾನ ಟೀಕೆ ಮಾಡಿರುವುದಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮದೇ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸಲಾಗದ ಕೇರಳ ಸರ್ಕಾರ ಮತ್ತು ಪಾಕಿಸ್ತಾನಕ್ಕೆ ಕರ್ನಾಟಕದ ವಿಚಾರದಲ್ಲಿ ಮಾತನಾಡುವ ಹಕ್ಕಿಲ್ಲ ಎಂದು ಅವರು ಹೇಳಿದ್ದಾರೆ. ಅಕ್ರಮವಾಗಿ ಒತ್ತುವರಿ ಮಾಡಿದ್ದ ಮನೆಗಳನ್ನು ತೆರವು ಮಾಡಿದ ಬಳಿಕ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ಭರವಸೆ ನೀಡಿರುವ ಕಾಂಗ್ರೆಸ್ ಸರ್ಕಾರದ ನಡೆ ಅನುಮಾನಾಸ್ಪದವಾಗಿದ್ದು, ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ಇಂದಿಗೂ ಸೂರಿಲ್ಲದೆ ಬದುಕುತ್ತಿರುವ ನಿಜವಾದ ನಿರಾಶ್ರಿತರ ಕಡೆ ಸರ್ಕಾರ ಗಮನಹರಿಸಿಲ್ಲ ಎಂದು ಸೋಮಣ್ಣ ಪ್ರಶ್ನಿಸಿದ್ದಾರೆ.



