ಯುದ್ಧ ಮಾಡುವ ಅಗತ್ಯ ಇಲ್ಲ, ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ: ಸಿಎಂ ಸಿದ್ದರಾಮಯ್ಯ

0
Spread the love

ಮೈಸೂರು: ಯುದ್ಧ ಮಾಡುವ ಅಗತ್ಯ ಇಲ್ಲ, ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಟಿ. ಕೆ. ಲೇಔಟ್ ನಿವಾಸದ ಬಳಿ ಮಾತನಾಡಿದ ಅವರು, ಯುದ್ಧ ಮಾಡುವ ಅಗತ್ಯ ಇಲ್ಲ, ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ. ಭದ್ರತಾ ವ್ಯವಸ್ಥೆಯನ್ನು ಬಿಗಿ ಮಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು.

Advertisement

ನಾವು ಯುದ್ಧದ ಪರ ಇಲ್ಲ, ಶಾಂತಿ ಇರಬೇಕು, ಜನರಿಗೆ ಭದ್ರತೆ ಇರಬೇಕು ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ವಹಿಸಬೇಕು ಎಂದರು.

ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಕೇಂದ್ರಕ್ಕೆ ಸಹಕಾರ ನೀಡುತ್ತೇವೆ. ಇಲ್ಲಿ ಯಾರೆಲ್ಲೆ ಪಾಕಿಸ್ತಾನದ ಪ್ರಜೆಗಳಿದ್ದಾರೋ ಅವರ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಡುತ್ತೇವೆ ಎಂದು ಹೇಳಿದ್ದಾರೆ.

ಸಚಿವ ಸಂತೋಷ್ ಲಾಡ್ ಅವರು ಅಲ್ಲಿ ಸಿಲುಕಿರುವ ಎಲ್ಲಾ ಕನ್ನಡಿಗರನ್ನು ಕರೆದುಕೊಂಡು ಬಂದಿದ್ದಾರೆ. ಸದ್ಯ ನಾನು ಸಚಿವ ಸಂತೋಷ್ ಲಾಡ್ ಅವರಿಂದ ಮಾಹಿತಿ ಪಡೆದುಕೊಂಡಿಲ್ಲ. ಮಾಹಿತಿಯನ್ನ ಪಡೆದುಕೊಂಡ ನಂತರ ಇತರ ವಿಚಾರಗಳ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here