ನಾನು ಕಾಂಗ್ರೆಸ್ʼಗೆ ಹೋಗುವ ಪರಿಸ್ಥಿತಿ ಇಲ್ಲ: ಜಿ.ಟಿ.ದೇವೇಗೌಡ

0
Spread the love

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್​, ಜಿ.ಟಿ.ದೇವೇಗೌಡ ಭೇಟಿ ವಿಚಾರ ಸಂಬಂಧ ಸದಾಶಿವನಗರದಲ್ಲಿ ಅವರೇ ಬಂದು ನನ್ನನ್ನು ಭೇಟಿ ಮಾಡಿದ್ರು. ಭೇಟಿ ವೇಳೆ ಎಸ್​.ಟಿ.ಸೋಮಶೇಖರ್​ ಸೇರಿ ಹಲವರು ಇದ್ದರು ಎಂದು ಬೆಂಗಳೂರಿನಲ್ಲಿ ಟಿವಿ9ಗೆ JDS ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

Advertisement

ಈ ಹಿಂದೆ ಪಕ್ಷಕ್ಕೆ ಕರೆದರೂ ಯಾಕೆ ಬರಲಿಲ್ಲ ಎಂದು ಹೇಳಿದ್ರು. ಅದೃಷ್ಟ ಇರುವವರಿಗೆ ಅಧಿಕಾರ ಸಿಗುತ್ತೆ, ಇಲ್ಲಂದ್ರೆ ಸಿಗಲ್ಲ ಅಂದೆ. ನಾನು ಕಾಂಗ್ರೆಸ್​​ಗೆ ಹೋಗುವ ಪರಿಸ್ಥಿತಿ ಇಲ್ಲ. ನಾನು ಕಾಂಗ್ರೆಸ್​ಗೆ ಬರಲ್ಲ ಅಂತಾ ಡಿ.ಕೆ.ಶಿವಕುಮಾರ್​ಗೆ ಹೇಳಿದ್ದೇನೆ. ಜೆಡಿಎಸ್​ನ 19 ಶಾಸಕರೂ ಒಟ್ಟಾಗಿ ಇದ್ದೇವೆ. ಯಾವುದೇ ರೀತಿಯಲ್ಲಿ ಪಕ್ಷವನ್ನು ಒಡೆಯುವ ಕೆಲಸ ಮಾಡಲ್ಲ ಎಂದರು.


Spread the love

LEAVE A REPLY

Please enter your comment!
Please enter your name here