ಮೈಸೂರು: ನನ್ನ ತಂದೆ ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮುಡಾದಲ್ಲಿ ಕಾನೂನುಬಾಹಿರವಾಗಿ ಬದಲಿ ಭೂಮಿ ಪಡೆದ ಆರೋಪ ಸಂಬಂಧ ಮಾತನಾಡಿದ ಅವರು, ನನ್ನ ತಂದೆ ಸಿದ್ದರಾಮಯ್ಯ, ತಾಯಿ ಪಾರ್ವತಿ, ಮಾವ ಮಲ್ಲಿಕಾರ್ಜುನ ಮೂವರ ವಿರುದ್ಧವೂ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ.
Advertisement
ಇದು ತನಿಖಾ ಸಂಸ್ಥೆಗೂ ಗೊತ್ತಿದೆ ಎಂದು ಯತೀಂದ್ರ ಹೇಳಿದ್ದಾರೆ.ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಮುಡಾ ಕ್ಲೀನ್ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಮುಡಾವನ್ನು ಕ್ಲೀನ್ ಮಾಡಲು ಆಯೋಗ ರಚನೆ ಮಾಡಿದ್ದೇವೆ. ಮುಡಾವನ್ನು ಖಂಡಿತಾ ನಾವೇ ಕ್ಲೀನ್ ಮಾಡುತ್ತೇವೆ ಎಂದು ಯತೀಂದ್ರ ಹೇಳಿದ್ದಾರೆ.