ಬೆಂಗಳೂರು: ಚನ್ನಪಟ್ಟಣದಲ್ಲಿ ಯಾವ ರಣನೂ ಇಲ್ಲ, ರಂಗವೂ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಯಾವ ರಣನೂ ಇಲ್ಲ, ರಂಗವೂ ಇಲ್ಲ. ಮತದಾರನ ಹೃದಯ ಗೆಲ್ಲಬೇಕು. ನಾವು ಮಾಡಿರುವ ಕೆಲಸಕ್ಕೆ, ಮಾಡುತ್ತಿರುವ ಕೆಲಸಕ್ಕೆ ಜನ ಗುರುತಿಸಿ ಎಂದು ಕೇಳಲು ಹೋಗುತ್ತಿದ್ದೇವೆ. ರಣರಂಗ ಆಡಿದವರೆಲ್ಲ ಮುಗಿದು ಹೋಗಿದ್ದಾರೆ. ಈಗ ಏನಿದ್ದರೂ ಜನರ ಲಾಭ ಮಾತ್ರ ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ಟಾಂಗ್ ಕೊಟ್ರು.
Advertisement
ಇನ್ನು ಚನ್ನಪಟ್ಟಣದಲ್ಲಿ ಬಿಜೆಪಿ ನಾಯಕರಿಂದ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಸಾಥ್ ಕೊಟ್ಟಿರೋದು ಒಳ್ಳೆಯದು ಅಲ್ಲವಾ. ಬಿಜೆಪಿ ಪಾದಯಾತ್ರೆಗಂತೂ ಜೆಡಿಎಸ್ ಅವರು ಸಾಥ್ ಕೊಟ್ಟಿರಲಿಲ್ಲ. ಆದರೂ ಜೆಡಿಎಸ್ಗೆ ಬಿಜೆಪಿ ಅವರು ಸಾಥ್ ಕೊಡುತ್ತಿದ್ದಾರೆ, ಕೊಡಲಿ ಎಂದು ಬಿಜೆಪಿ ನಾಯಕರಿಗೆ ತಿವಿದರು.