ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುವುದರಲ್ಲಿ ತಪ್ಪೇನಿಲ್ಲ: ಗೋವಿಂದ ಕಾರಜೋಳ

0
Spread the love

ಚಿತ್ರದುರ್ಗ: ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುವುದರಲ್ಲಿ ತಪ್ಪೇನಿಲ್ಲ, ನಾನು ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ನನ್ನ ವಸತಿ ನಿಲಯವನ್ನು ಗುಡಿಸಿ ಸ್ವಚ್ಛಗೊಳಿಸುತ್ತಿದ್ದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

Advertisement

ಚಿತ್ರದುರ್ಗಲ್ಲಿ ಮತಾನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವೀಡಿಯೊಗಳನ್ನು ನಾನು ನೋಡಿದ್ದೇನೆ.

ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪೊರಕೆ ನೀಡುವುದು ಅಪರಾಧ ಎಂಬಂತೆ ಕಾಣುತ್ತಿದ್ದು, ಇದರಿಂದ ಸ್ವಚ್ಛತೆಯ ಕೆಲಸ ಕೀಳು ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ಮೂಡಿದೆ. ಬದಲಾಗಿ ಮಕ್ಕಳಿಗೆ ಸ್ವಚ್ಛತೆಯ ಬಗ್ಗೆ ತಿಳಿಹೇಳುವುದು ಅವಶ್ಯವಾಗಿದೆ.

ಅದಲ್ಲದೆ ವಿದ್ಯಾರ್ಥಿಗಳು ಕೆಲ ಎಚ್ಚರಿಕೆಗಳನ್ನು ಬಳಸಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದರಲ್ಲಿ ತಪ್ಪೇನಿಲ್ಲ. ಯಾವುದೇ ತಾರತಮ್ಯವಿಲ್ಲದೆ ಎಲ್ಲ ವಿದ್ಯಾರ್ಥಿಗಳು ಸ್ವಚ್ಛತೆಯಲ್ಲಿ ತೊಡಗಬೇಕು. ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಕೂಡ ಇದರಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here