ಆಗಸ್ಟ್, ಸೆಪ್ಟೆಂಬರ್’ನಲ್ಲಿ ಭಾರೀ ಬದಲಾವಣೆಯಾಗಲಿದೆ: ಸಚಿವ ರಾಜಣ್ಣ ಸ್ಪೋಟಕ ಹೇಳಿಕೆ

0
Spread the love

ಬೆಂಗಳೂರು: ಸರ್ಕಾರದ ವಿರುದ್ಧವೇ ಕಾಂಗ್ರೆಸ್ ಶಾಸಕರು ಸಿಡಿದೆದ್ದಿದ್ದಾರೆ. ಬಹಿರಂಗವಾಗಿ ಹೇಳಿಕೆ ನೀಡುತ್ತಾ ಸಿಎಂ ಸಿದ್ದರಾಮಯ್ಯಗೆ ಮುಜುಗರ ತರಿಸ್ತಿದ್ದಾರೆ. ಇದ್ರ ಬೆನ್ನಲ್ಲೇ ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆಎನ್‌ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

Advertisement

ನಗರದಲ್ಲಿ ಮಾತನಾಡಿದ ಅವರು, ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ನಡೆಯಲಿದೆ. ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಕಳೀಲಿ ಎಂದು ಹೇಳಿದ್ದಾರೆ.

ಏನ್ ಮಾಡೋದು ಪವರ್ ಸೆಂಟರ್‌ಗಳು ಜಾಸ್ತಿಯಾಗಿವೆ. ಒಂದು ಎರಡು ಮೂರು ಲೆಕ್ಕಕ್ಕೆ ಇಲ್ಲದಷ್ಟು ಆಗಿವೆ. 2013 ರಿಂದ 2018ವರೆಗೆ ಒಂದೇ ಪವರ್ ಸೆಂಟರ್ ಇತ್ತು. ಹೀಗಾಗಿ ಅವರಿಗೆ ಯಾವುದೇ ಒತ್ತಡ ಇರಲಿಲ್ಲ. ಆದರೆ ಈಗ ಪವರ್ ಸೆಂಟರ್ ಜಾಸ್ತಿ ಆಗಿ ಜಂಜಾಟ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಶಾಸಕರಿಗೆ ಅನುದಾನ ಸಿಗುತ್ತಿಲ್ಲ ಎಂಬ ಆರೋಪಕ್ಕೆ, ಸಿಎಂ ರಾಜ್ಯಾದ್ಯಂತ ಪ್ರವಾಸ ಮಾಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಡುತ್ತಿದ್ದಾರೆ. ದುಡ್ಡು ಇಲ್ಲದೆ ಇದ್ದರೆ ಅನುದಾನ ಕೊಡಲು ಸಾಧ್ಯವೇ? ಅವರ ಬೇಡಿಕೆಗೆ ತಕ್ಕಂತೆ ಅನುದಾನ ಸಿಕ್ಕಿಲ್ಲ ಎಂಬ ಅಸಮಾಧಾನ ಇರಬಹುದು. ಗ್ಯಾರಂಟಿ ಯೋಜನೆಗಳನ್ನ ಕೊಟ್ಟಿರೋದ್ರಿಂದ ಆರ್ಥಿಕ ಹೊರೆ ಸರ್ಕಾರದ ಮೇಲಿದೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here