ಕಳ್ಳರ ಕೈಚಳಕ: ಪೊಲೀಸ್ ಠಾಣೆ ಎದುರಿನಲ್ಲೇ ಎರಡು ಅಂಗಡಿಗಳ ಬೀಗ ಮುರಿದು ದರೋಡೆ!

0
Spread the love

ಹೊಸಕೋಟೆ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿ ಪ್ರದೇಶದಲ್ಲಿ ನಡೆದ ಕಳ್ಳತನ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Advertisement

ಪೊಲೀಸ್ ಠಾಣೆ ಎದುರಿನಲ್ಲೇ ಈ ಕಳ್ಳತನ ನಡೆದಿರುವುದು ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ನಂದಗುಡಿ ಪೊಲೀಸ್ ಠಾಣೆಯ ಸಮೀಪದಲ್ಲಿರುವ ಮೆಡಿಕಲ್ ಸ್ಟೋರ್ ಮತ್ತು ಜನರಲ್ ಸ್ಟೋರ್ಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಚಿಂತಾಮಣಿ–ಹೊಸಕೋಟೆ ಮುಖ್ಯರಸ್ತೆಯ ಅಂಗಡಿಗಳ ಬೀಗ ಮುರಿದು ರಾತ್ರಿ ವೇಳೆ ಕಳ್ಳತನ ಮಾಡಿದ್ದಾರೆ.

ಸುಮಾರು ₹80 ಸಾವಿರ ಮೌಲ್ಯದ ಸಿಗರೇಟ್ ಬಂಡಲ್‌ಗಳು ಹಾಗೂ ₹70 ಸಾವಿರ ನಗದು ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಬೆಳಿಗ್ಗೆ ಅಂಗಡಿ ಮಾಲೀಕರು ಅಂಗಡಿ ತೆರೆಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಹಿನ್ನೆಲೆ ಅಂಗಡಿ ಮಾಲೀಕರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಿಸಿಟಿವಿ ಅಳವಡಿಸಲು ಪೊಲೀಸರಿಗೆ ಹಣ ನೀಡಿದ್ದರೂ ಅವರು ಸಿಸಿಟಿವಿ ಅಳವಡಿಸಿಲ್ಲ ಎಂದು ಹರಿಹಾಯ್ದಿದ್ದಾರೆ.

ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here