ಕಿಲಾಡಿಗಳು, ಬಿಎಂಟಿಸಿ ಟಿಕೆಟ್ ರೋಲ್ ಕದ್ದು ತರಕಾರಿ ಅಂಗಡಿಗೆ ಮಾರಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ. ಯಲಹಂಕದ ಅಟ್ಟೂರು ಲೇಔಟ್ನ ಎಸ್ಆರ್ಎಸ್ ತರಕಾರಿ ಹಾಗೂ ಹಣ್ಣು ವ್ಯಾಪಾರಿ ಮಳಿಗೆಯಲ್ಲಿ ಟಿಕೆಟ್ ರೋಲ್ ಉಪಯೋಗಿಸಿ,
Advertisement
ತರಕಾರಿ ಹಾಗೂ ಹಣ್ಣಿನ ರೇಟ್ ಮುದ್ರಿಸಿ ಕೊಟ್ಟಿದ್ದ. ಈ ಬಗ್ಗೆ ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಬಿಎಂಟಿಸಿಗೆ ಮಾಹಿತಿ ನೀಡಿದ್ದರು. ಬಿಎಂಟಿಸಿ ಅಧಿಕಾರಿಗಳು ಅಂಗಡಿಗೆ ಹೋಗಿ ಪರಿಶೀಲಿಸಿದಾಗ ಎರಡು ಟಿಕೆಟ್ ರೋಲ್ ಪತ್ತೆಯಾಗಿದೆ.ವ್ಯಾಪಾರಿ ಮುರಳಿಕೃಷ್ಣ ಮೇಲೆ ಯಲಹಂಕ ನ್ಯೂ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.