ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹಕತಾರೆ ರಮ್ಯಾ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಆರ್ಸಿಬಿ ಗೆದ್ದ ರಾತ್ರಿ ಕರ್ನಾಟಕದಾದ್ಯಂತ ಸಂಭ್ರಮಾಚರಣೆಗಳು ನಡೆದವು. ಮಾಲ್ಗಳಲ್ಲಿ ಮತ್ತು ಬೀದಿಗಳಲ್ಲಿ ಜನರು ಖುಷಿಯಿಂದ ಕುಣಿದರು. ಆಗ ಒಂದೇ ಒಂದು ಅಹಿತಕರ ಘಟನೆಯೂ ನಡೆದಿಲ್ಲ.
ಕಾಲ್ತುಳಿತಗಳು ಸುಮ್ಮನೆ ಸಂಭವಿಸುವುದಿಲ್ಲ, ಅವುಗಳನ್ನು ಸೃಷ್ಟಿ ಮಾಡಲಾಗುತ್ತದೆ. ಸರ್ಕಾರ, ಅಧಿಕಾರಿಗಳು, ಆರ್ಸಿಬಿ, ಪೊಲೀಸರು, ಕೆಎಸ್ಸಿಎ ಮತ್ತು ಸಾರ್ವಜನಿಕರ ಸಾಮೂಹಿಕ ವೈಫಲ್ಯದಿಂದ ಈ ಕಾಲ್ತುಳಿತ ನಡೆದಿದೆ’ ಎಂದು ರಮ್ಯಾ ಹೇಳಿದ್ದಾರೆ.
ಕ್ರೀಡೆಯ ಗೆಲುವನ್ನು ಆಚರಿಸಲು ಬಂದ ಮುಗ್ಧರು ಮೃತಪಟ್ಟಿದ್ದಾರೆ. ಈ ಸಾವಿಗೆ ಕಾರಣಗಳನ್ನು ಕಂಡುಹಿಡಿಯಲು ಮತ್ತು ನ್ಯಾಯ ಒದಗಿಸಲು ಪ್ರಾಮಾಣಿಕ ಆತ್ಮಾವಲೋಕನದ ಅಗತ್ಯವಿದೆ. ಇಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ನಿರ್ಧಾರವು ಯೋಚಿಸದೇ ತೆಗೆದುಕೊಂಡ ನಿರ್ಧಾರದಂತೆ ಕಾಣುತ್ತದೆ. ಈ ನಿರ್ಧಾರ ತೆಗೆದುಕೊಳ್ಳುವ ಮೊದಲು ವರದಿಗಾಗಿ ಕಾಯಬೇಕಿತ್ತು’ ಎಂದು ರಮ್ಯಾ ಅಭಿಪ್ರಾಯ ಹೊರಹಾಕಿದ್ದಾರೆ
ಅಲ್ಲಿ ಬಂದ ಎಲ್ಲರಿಗೂ ಒಳ್ಳೆಯ ಉದ್ದೇಶವೇ ಇತ್ತು. ಆದರೆ, ಯೋಜನೆ ಇಲ್ಲದೆ, ಸಮನ್ವಯದ ಕೊರತೆಯಿಂದ ಈ ರೀತಿ ಆಯಿತು. ಆಟಗಾರನ್ನು ಒಂದೇ ಸ್ಥಳದಲ್ಲಿ ಸೇರಿಸುವ ಬದಲು ತೆರೆದ ಬಸ್ನಲ್ಲಿ ರ್ಯಾಲಿ ಮಾಡಿದ್ದರೆ ಭಯಾನಕ ಘಟನೆಯನ್ನು ತಪ್ಪಿಸಬಹುದಿತ್ತು’ ಎಂದು ರಮ್ಯಾ ಹೇಳಿದ್ದಾರೆ.