ಇವನೊಬ್ಬ ಡಿಫರೆಂಟ್ ಕಳ್ಳ: ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ಹೋದ ಖದೀಮ!

0
Spread the love

ಮಂಡ್ಯ :-ಜಿಲ್ಲೆಯ ಮದ್ದೂರು ತಾಲೂಕಿನ ಕದಲೂರು ಗ್ರಾಮದ ದೇವಸ್ಥಾನವೊಂದರಲ್ಲಿ ಕಳ್ಳತನಕ್ಕೆ ಬಂದಿದ್ದ ಕಳ್ಳನೊಬ್ಬ ಕೊನೆ ಕ್ಷಣದಲ್ಲಿ ಹೆದರಿ ದೇವರಿಗೆ ಕೈ ಮುಗಿದು ಹೋಗಿರುವ ಘಟನೆ ಜರುಗಿದೆ.

Advertisement

ಮುಸುಕುಧಾರಿಯೊಬ್ಬ ಕದಲೂರು ಗ್ರಾಮದ ಶ್ರೀ ಪಟ್ಟಲದಮ್ಮ ದೇಗುಲದಲ್ಲಿ ಗುರುವಾರ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಮೊದಲು ದೇವಾಲಯದ ಸುತ್ತ ಗಮನಿಸಿದ್ದಾನೆ. ಆದರೆ, ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿದ್ದಾನೆ.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಪ್ರಕರಣ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

LEAVE A REPLY

Please enter your comment!
Please enter your name here