ಬೆಂಗಳೂರು: ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಕುಮಾರಸ್ವಾಮಿ ನೇತೃತ್ವದ ಸರ್ಕಾರವಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಜಾತಿ ಗಣತಿ ಕುರಿತು HDK ಹೇಳಿಕೆಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕುಮಾರಸ್ವಾಮಿ ಯವರದ್ದಲ್ಲ ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ,
Advertisement
ಹಿಂದೆ ಕುಮರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪವರ ಮುಖ್ಯಮಂತ್ರಿಯಾಗಿದ್ದಾಗ ನಡೆದ ಪ್ರಮಾದಗಳನ್ನು ತಾನು ಎಣಿಸುತ್ತಾ ಕೂರಲ್ಲ, ಮಾಡಲು ಬೇಕಾದಷ್ಟು ಕೆಲಸವಿದೆ ಎಂದರು.
ಸಾಮಾಜಿಕ, ಅರ್ಥಿಕ ಮತ್ತು ಶೈಕ್ಷಣಿಕವಾಗಿ ಜನರಿಗೆ ನ್ಯಾಯ ಒದಗಿಸಿಕೊಡಲು ಸಿದ್ದರಾಮಯ್ಯ ಜಾತಿ ಗಣತಿಯನ್ನು ಮಾಡಿಸಿದ್ದಾರೆ, ಎಲ್ಲರಿಗೂ ಸಮಾನತೆ ಒದಗಿಸಿಕೊಡಬೇಕೆಂಬ ಚಿಂತನೆ ಅವರಿಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.