ಮೈಸೂರು: ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಎಂಬ ಭವಿಷ್ಯ ಸ್ಫೋಟಗೊಂಡಿದೆ. ಜುಲೈ ಒಂದೇ ತಿಂಗಳು ಮಧ್ಯದಲ್ಲಿದೆ. ಆಗಸ್ಟ್-ಸೆಪ್ಟೆಂಬರ್ ನಂತ್ರ ಬದಲಾವಣೆ ಗಾಳಿ ಬೀಸುತ್ತೆ ಅಂತ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಇದರ ನಡುವೆ ಸಿಎಂ ಕುರ್ಚಿ ಬದಲಾವಣೆ ಬಗ್ಗೆ ಅಗ್ರಿಮೆಂಟ್ ಆಗಿರುವುದು ಖಚಿತ.
Advertisement
ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಸರ್ಕಸ್ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸೆಪ್ಟಂಬರ್ನಲ್ಲಿ ಸಿಎಂ ಬದಲಾವಣೆ ಖಚಿತ.
ಈ ಬಗ್ಗೆ ಕಾಂಗ್ರೆಸ್ನಲ್ಲಿ ಅಗ್ರಿಮೆಂಟ್ ಆಗಿರುವುದು ಅಷ್ಟೇ ಖಚಿತ. ಈ ನಡುವೆ ಕುರ್ಚಿ ಉಳಿಸಿಕೊಳ್ಳಲು ಬೇರೆ ಬೇರೆ ರೀತಿ ಟ್ರಯಲ್ ನಡೆಯುತ್ತಿದೆ. ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಈ ಬಾರಿ ದಸರಾ ಹೊಸ ಸಿಎಂರಿಂದ ಉದ್ಘಾಟನೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.