ಕಾಂಗ್ರೆಸ್ ಸೇರ್ಪಡೆ ವಿಚಾರ: ರಾಜೀನಾಮೆ ಸಲ್ಲಿಕೆ ಬಳಿಕ ಸಿ.ಪಿ ಯೋಗೇಶ್ವರ್ ಮೊದಲ ಪ್ರತಿಕ್ರಿಯೆ ಹೀಗಿತ್ತು.!

0
Spread the love

ಹುಬ್ಬಳ್ಳಿ: ಸಿ.ಪಿ ಯೋಗೇಶ್ವರ್ ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

Advertisement

ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯ ಇಲ್ಲ. ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಮಾಡಲು ಯಾವುದೇ ಸಮಸ್ಯೆ ಇಲ್ಲ ಆದರೆ ಜೆಡಿಎಸ್ ಕಾರ್ಯಕರ್ತರು ವಿರೋಧ ಮಾಡಿದ್ದಾರೆ.

ಎನ್‌ಡಿಎ ಅಭ್ಯರ್ಥಿಯಾಗುವ ಆಸೆಯಿದೆ. ಇನ್ನೂ ಅವಕಾಶವಿದೆ. ಹೈಕಮಾಂಡ್ ಒಂದು ಅವಕಾಶ ನೀಡಬೇಕು. ನಮ್ಮ ಪಕ್ಷ ನಾಯಕರು ನನ್ನ ಜೊತೆಗಿದ್ದಾರೆ. ಆದರೆ ಕುಮಾರಸ್ವಾಮಿ ಒಪ್ಪಿಗೆಗೆ ಸೂಚನೆ ನೀಡಿಲ್ಲ. ಹೀಗಾಗಿ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ.

ಉಪಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ. ಈ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರನಾಗಿದ್ದೇನೆ ಎಂದು ಹೇಳಿದರು. ಕಾಂಗ್ರೆಸ್ ಸೇರುವ ಬಗ್ಗೆ ಯೋಚನೆ ಮಾಡಿಲ್ಲ. ನಾನು ಇಲ್ಲಿಯ ತನಕವೂ ಯಾರ ಸಂಪರ್ಕ ಮಾಡಿಲ್ಲ. ಆದರೆ ನಾಳೆ ಏನು ಆಗುತ್ತದೆ ಎನುವುದನ್ನು ಹೇಳಲು ಸಾಧ್ಯವಿಲ್ಲ ಎಂದರು.


Spread the love

LEAVE A REPLY

Please enter your comment!
Please enter your name here