HomeIndia Newsರಾಮಭಕ್ತರ ನಂಬಿಕೆಗೆ ಧಕ್ಕೆ ತಂದವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್ ಎಚ್ಚರಿಕೆ

ರಾಮಭಕ್ತರ ನಂಬಿಕೆಗೆ ಧಕ್ಕೆ ತಂದವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್ ಎಚ್ಚರಿಕೆ

For Dai;y Updates Join Our whatsapp Group

ಲಕ್ನೋ: ಅಯೋಧ್ಯೆ ರಾಮಮಂದಿರದ ಕಾಣಿಕೆ ಹಣ ದುರುಪಯೋಗ ಪ್ರಕರಣದ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ರಾಮಭಕ್ತರು ತಮ್ಮ ಭಕ್ತಿ ಮತ್ತು ನಂಬಿಕೆಯಿಂದ ಕಾಣಿಕೆ ನೀಡುತ್ತಾರೆ. ಆ ಹಣದಲ್ಲಿ ಅಕ್ರಮ ಎಸಗುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಡಿಯೋರಿಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ, ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಲಾಗಿದ್ದು, ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಸನಾತನ ಧರ್ಮದ ಭಾವನೆಗಳಿಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈ ವಿಚಾರವನ್ನು ರಾಜಕೀಯಗೊಳಿಸುವ ಪ್ರಯತ್ನಗಳ ವಿರುದ್ಧವೂ ಯೋಗಿ ಅಸಮಾಧಾನ ವ್ಯಕ್ತಪಡಿಸಿದರು. ರಾಮಮಂದಿರ ನಿರ್ಮಾಣವನ್ನು ಮೊದಲಿನಿಂದಲೂ ವಿರೋಧಿಸಿದ್ದವರೇ ಈಗ ಈ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

“ರಾಮನೇ ಇಲ್ಲ ಎಂದು ಹೇಳಿದ್ದವರು, ದೇವಾಲಯದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದವರು, ರಾಮಭಕ್ತರ ಮೇಲೆ ಗುಂಡು ಹಾರಿಸಿದ್ದವರು ಮತ್ತು ರಾಮನವಮಿ ವೇಳೆ ಗಲಭೆಗಳಿಗೆ ಕಾರಣರಾದವರೇ ಈಗ ಮತ್ತೆ ಈ ವಿಚಾರವನ್ನು ಎತ್ತುತ್ತಿದ್ದಾರೆ” ಎಂದು ಅವರು ವಾಗ್ದಾಳಿ ನಡೆಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img