ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿಗೆ ಬೆದರಿಕೆ ಕರೆ..! ದೂರು ದಾಖಲು

0
Spread the love

ಮೈಸೂರು: ಗೋವು ಸಾಗಾಣಿಕೆ ವೇಳೆ ಇದ್ರಿಷ್ ಪಾಷಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧ ಹಿಂದೂಪರ ಕಾರ್ಯಕರ್ತ ಪುನೀತ್​​ ಕೆರೆಹಳ್ಳಿ ಆರೋಪ ಎದುರಿಸುತ್ತಿದ್ದಾರೆ. ಇದೀಗ ಇದ್ರಿಷ್ ಪಾಷಾ ಸಾವಿನ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ವಾಟ್ಸಾಪ್​ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ.

Advertisement

ಈ ಘಟನೆ ಸಂಬಂಧ ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬಾತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಗೋವು ಸಾಗಾಣಿಕೆ ವೇಳೆ ಇದ್ರಿಷ್ ಪಾಷಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧ ಹಿಂದೂಪರ ಕಾರ್ಯಕರ್ತ ಪುನೀತ್​​ ಕೆರೆಹಳ್ಳಿ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್​​ ಕೆರೆಹಳ್ಳಿ ಸೇರಿ ಐವರು ಆರೋಪಿಗಳನ್ನ ಬಂಧಿಸಲಾಗಿತ್ತು. ಬಳಿಕ 2023 ಮೇ ತಿಂಗಳಿನಲ್ಲಿ  ಹೈಕೋರ್ಟ್‌ ಎಲ್ಲರಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.


Spread the love

LEAVE A REPLY

Please enter your comment!
Please enter your name here