Accident: ಸರಣಿ ಅಪಘಾತದಲ್ಲಿ ಮೂವರು ಸಾವು, ನಾಲ್ವರಿಗೆ ಗಂಭೀರ ಗಾಯ!

0
Spread the love

ನೆಲಮಂಗಲ: ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಜರುಗಿದೆ.

Advertisement

ಘಟನೆಯಿಂದ ಮೂವರು ದಾರುಣ ಸಾವನ್ನಪ್ಪಿದರೆ, ಇನ್ನೂ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಅಪಘಾತ ಸಂಭವಿಸಿದೆ.

ಸಾವನ್ನಪ್ಪಿದ ಮೂರು ಕಾರ್ಮಿಕರು ಕಾಂಕ್ರೀಟ್ ಕೆಲಸ ಮಾಡುವವರು ಎನ್ನಲಾಗಿದೆ. ಅಪಘಾತವು ಲಾರಿ, ಟೆಂಪೋ, ಕಾಂಕ್ರೀಟ್ ಮಿಕ್ಸರ್ ನಡುವೆ ಸಂಭವಿಸಿದೆ. ಘಟನೆಯಿಂದ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಟ್ರಾಫಿಕ್ ತೆರವು ಕಾರ್ಯ ಮಾಡುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here