ಭೀಕರ ಅಪಘಾತ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಮೂವರು ಸಾವು!

0
Spread the love

ರಾಮನಗರ:- ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಜರುಗಿದೆ.

Advertisement

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಗುದ್ದಿದ ಕಾರು ಎದುರು ಬದಿಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿಗೆ ಗುದ್ದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರು ಪುರುಷರು, ಹಾಗೂ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಘಟನೆ ತಾಲೂಕಿನ‌ ಸಂಗಬಸವನದೊಡ್ಡಿ ಬಳಿ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಜರುಗಿದೆ. ಘಟನೆಯಲ್ಲಿ ಲಿಯಾಕತ್, ಅಸ್ಮಾ, ನೂರ್, ‌ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕುಟುಂಬ, ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ತೆರಳುತ್ತಿತ್ತು. ಕಾರು ಡಿವೈಡರ್​ಗೆ ಕಾರು ಗುದ್ದಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರನ್ನು ಹೊರ ತೆಗೆಯಲು ಹರಸಾಹಸಪಡಬೇಕಾಯಿತು.

ಅಪಘಾತ ಕಾರಣ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ರಾಮನಗರ ಟ್ರಾಫಿಕ್ ಪೊಲೀಸರು ಪರಿಶೀಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here