ಬೆಂಗಳೂರು:- ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಜಮ್ಮು ಕಾಶ್ಮೀರದಲ್ಲಿ ಜರುಗಿದೆ.
Advertisement
ತಂದ್ರ ದಾಸ್(67) ಮೊನಾಲಿಸಾ ದಾಸ್(41),ಮತ್ತೊಬ್ಬ ಪುರುಷ ಸಾವನ್ನಪ್ಪಿದವರು ಎನ್ನಲಾಗಿದೆ. ಬಾಲಕಿ ಅದ್ರಿತಾ ಖಾನ್(9) ಗೆ ಗಾಯಗಳಾಗಿದೆ. ಅಮರನಾಥ ಯಾತ್ರ ಸಮೀಪದ ಝೋಜಿಲ್ ಪಾಸ್ ಬಳಿ ಘಟನೆ ಜರುಗಿದೆ. ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದು, ಜಮ್ಮು ಕಾಶ್ಮೀರದಲ್ಲಿ ಬಾಡಿಗೆ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದರು ಎನ್ನಲಾಗಿದೆ.
ಎದುರಿದ್ದ ಕಾರೊಂದು ಕೆಟ್ಟು ನಿಂತಿತ್ತು. ಈ ವೇಳೆ ಅದನ್ನು ನೋಡಲು ಚಾಲಕ ಕಾರಿನಿಂದ ಇಳಿದಿದ್ದ ಹ್ಯಾಂಡ್ ಬ್ರೇಕ್ ಹಾಕಿರಲಿಲ್ಲ. ಹೀಗಾಗಿ ಪ್ರಪಾತಕ್ಕೆ ಬ
ಕಾರು ಬಿದ್ದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಸಿಆರ್ ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಹೊರ ತೆಗೆದಿದ್ದಾರೆ.