ನಿನ್ನೆಯಷ್ಟೇ ರಾಜ್ಯಪಾಲರ ವಿರುದ್ಧ ಗುಡುಗು: ಇಂದು ಅವರ ಜೊತೆಯಲ್ಲೇ ಊಟ ಸವಿದ ಡಿಕೆಶಿ

0
Spread the love

ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ಸಾಕ್ಷಿಯಾಗುವಂತಿದೆ. ಸದ್ಯ ಕೇಸ್ ಹೈಕೋರ್ಟ್​ನಲ್ಲಿದ್ದು, ಗುರುವಾರ ಮತ್ತೆ ವಿಚಾರಣೆಗೆ ಬರಲಿದೆ. ಏನಾಗಲಿದೆ ಎಂಬ ಕುತೂಹಲ ಮೂಡಿದೆ.

Advertisement

ಈ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಆಗಸ್ಟ್ 31ಕ್ಕೆ ರಾಜ್ಯಪಾಲರ ನಡೆ ಖಂಡಿಸಿ, ರಾಜಭವನ ಚಲೋ ರ‍್ಯಾಲಿಗೆ ಕರೆ ನೀಡಿದ್ದಾರೆ.ಅತ್ತ ಸಚಿವ ಬೈರತಿ ಸುರೇಶ್ ಅವರ ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಡಿಸಿಎಂ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜೊತೆಯಲ್ಲಿ ಕುಳಿತು ಊಟ ಸವಿದಿದ್ದಾರೆ.

ಹೌದು ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದಿದೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಪಾಲ್ಗೊಂಡಿದ್ದರು. ಸಚಿವ ಡಾ ಎಂ ಸಿ ಸುಧಾಕರ್, ಶಾಸಕ ಶರತ್ ಬಚ್ಚೇಗೌಡ ಉಪಸ್ಥಿತರಿದ್ದರು.

 


Spread the love

LEAVE A REPLY

Please enter your comment!
Please enter your name here