ಕರ್ನಾಟಕದ 14 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

0
Spread the love

ಬೆಂಗಳೂರು: ರಾಜ್ಯದ ಕರಾವಳಿ ಭಾಗ ಸೇರಿದಂತೆ ಒಟ್ಟು 14 ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Advertisement

ಅದರೊಂದಿಗೆ ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಹ ಜೋರು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 9ರಿಂದ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ನಡುವೆ ಭಾಲ್ಕಿ, ರಾಯಲ್ಪಾಡು, ಶಾಹಪುರ, ಚಾಮರಾಜನಗರ, ಗೋಪಾಲನಗರ, ಹೆಸರಘಟ್ಟ, ಕೃಷ್ಣರಾಜಪೇಟೆ, ದೇವರಹಿಪ್ಪರಗಿ, ಹೊಸಕೋಟೆ, ಮುದ್ದೇಬಿಹಾಳ, ಟಿಜಿ ಹಳ್ಳಿ, ಬೆಂಗಳೂರು ಕೆಐಎಎಲ್, ಚಿಕ್ಕಬಳ್ಳಾಪುರ, ಹಗರಿಬೊಮ್ಮನಹಳ್ಳಿ, ಕನಕಪುರ, ಕೆಂಭಾವಿ, ಅಫ್ಝಲ್‌ಪುರ, ಎಂಎಂ ಹಿಲ್ಸ್, ಮದ್ದೂರು, ನಾಗಮಂಗಲ, ಸೇಡಂ, ಶಿರಹಟ್ಟಿ ಹಾಗೂ ಥೊಂಡೇಭಾವಿ ಪ್ರದೇಶಗಳಲ್ಲಿ ಈಗಾಗಲೇ ಮಧ್ಯಮದಿಂದ ಭಾರಿ ಮಳೆ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here