ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ಮೃತಳಾಗಿರುವ ವರ್ಷಾ (22) ಮೈಸೂರಿನಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದರು. ಕೆಲ ದಿನಗಳಿಂದ ಯುವಕನೊಬ್ಬ ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದನೆಂದೂ, ಈ ಕಿರುಕುಳಕ್ಕೆ ಬೇಸತ್ತು ವರ್ಷಾ ಆತ್ಮಹತ್ಯೆಗೆ ಶರಣಾಗಿದ್ದಾರೆಂದೂ ಹೇಳಲಾಗಿದೆ.
ಘಟನೆಯ ಬಳಿಕ ವರ್ಷಾ ಅವರ ತಾಯಿ ನಾಗರತ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಯಳಂದೂರು ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



