ತಿರುಪತಿ ಕಾಲ್ತುಳಿತ ಪ್ರಕರಣ; ಮೃತರಿಗೆ 25 ಲಕ್ಷ ಪರಿಹಾರ ಘೋಷಣೆ

0
Spread the love

ತಿರುಪತಿ: ತಿರುಮಲದಲ್ಲಿ ಬುಧವಾರ ರಾತ್ರಿ ಸಂಭವಿಸಿದ್ದ ಕಾಲ್ತುಳಿತದಲ್ಲಿ  ಕಾಲ್ತುಳಿತ ದುರಂತದಲ್ಲಿ ಐವರು ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ ತಮಿಳುನಾಡಿನ ಸೇಲಂ ನಿವಾಸಿ ಮಲ್ಲಿಕಾ ಮತ್ತು ನಿರ್ಮಲಾ (55) ಮೃತ ಮೃತ ದುರ್ದೈವಿಗಳು. 48 ಜನರಿಗೆ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

Advertisement

ಇನ್ನೂ  ಮೃತಪಟ್ಟ ಭಕ್ತರ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಗುರುವಾರ ಘೋಷಿಸಿದೆ.

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ತಿಮ್ಮಪ್ಪನ ದರ್ಶನಕ್ಕಾಗಿ ದೇಶದ ವಿವಿಧೆಡೆಯಿಂದ ಭಕ್ತರು ತಿರುಪತಿಗೆ ಆಗಮಿಸಿದ್ದಾರೆ. ಬುಧವಾರ ಸಂಜೆ ಸರ್ವದರ್ಶನ ಟಿಕೆಟ್​ ವಿತರಣೆಯ ವೇಳೆ ಜನರು ಏಕಾಏಕಿ ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಗಿತ್ತು. ಇದರಲ್ಲಿ ಐವರು ಮಹಿಳೆಯರು ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. 40 ಕ್ಕೂ ಅಧಿಕ ಭಕ್ತರು ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗುವುದು. ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ಭಕ್ತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ನೇತೃತ್ವದ ಸರ್ಕಾರ ತಿಳಿಸಿದೆ.

 


Spread the love

LEAVE A REPLY

Please enter your comment!
Please enter your name here