ಕನ್ನಡ ಬೆಳ್ಳಿತೆರೆಯಲ್ಲಿ ಸುಮಾರು 5 ದಶಕಗಳ ಕಾಲ ವಿಜೃಂಭಿಸಿದ ಕೋಟ್ಯಾಂತರ ಕನ್ನಡಿಗರ ಆರಾಧ್ಯ ದೈವವಾಗಿರುವ ನಟ ಸಾರ್ವಭೌಮ ಡಾ. ರಾಜ್ ಕುಮಾರ್ ಹುಟ್ಟುಹಬ್ಬವಿಂದು. ನಟಸಾರ್ವಭೌಮ, ಗಾನ ಗಂಧರ್ವ, ರಣಧೀರ ಕಂಠೀರವ ಹೀಗೆ ಅನೇಕ ಬಿರುದುಗಳನ್ನು ಹೊಂದಿರು ಡಾ.ರಾಜ್ಕುಮಾರ್ ಅವರಿಗೆ ಇಂದು 96ನೇ ವರ್ಷದ ಜನ್ಮದಿನ. ಡಾ.ರಾಜ್ ಕುಮಾರ್ ನಿಧನ ಹೊಂದಿ ಹಲವು ವರ್ಷಗಳೆ ಕಳೆದಿದ್ದರು ಅವರ ನೆನಪು ಅಭಿಮಾನಿಗಳೆದೆಯಲ್ಲಿ ಅಚ್ಚಳಿಯದೇ ಉಳಿದಿದೆ. ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳು ನಾನಾ ರೀತಿಯ ಸಮಾಜಮುಖಿ ಕೆಲಸಗಳನ್ನು ಕೈಗೊಂಡಿದ್ದಾರೆ.
ಡಾ.ರಾಜ್ ಕುಮಾರ್ ಅವರ 96ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಲು ಅವರ ಅಭಿಮಾನಿಗಳು ನಾನಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜೊತೆಗೆ ಕಂಠೀರವ ಸ್ಟುಡಿಯೋಗೆ ಇಂದು (ಏ.24) ಬೆಳಿಗ್ಗೆ 10 ಗಂಟೆಗೆ ಕುಟುಂಬಸ್ಥರು ಆಗಮಿಸಿ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ಅಪಾರ ಸಂಖ್ಯೆಯಲ್ಲಿ ಅಭಿಮಾಗಳು ರಾಜ್ ಕುಮಾರ್ ಸಮಾಧಿ ಬಳಿ ಆಗಮಿಸಲಿದ್ದಾರೆ.
ಪ್ರತಿ ವರ್ಷದಂತೆ ಈ ಸಲವೂ ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಈ ಎಲ್ಲ ಕೆಲಸಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲಿ ಆರಂಭವಾಗಲಿದೆ.
ಇವುಗಳ ಜೊತೆಗೆ ರಾಜ್ಯಾದ್ಯಂತ ಡಾ.ರಾಜ್ ಅಭಿಮಾನಿಗಳು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಅನ್ನ ಸಂತರ್ಪನೆ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿದ್ದಾರೆ. ಡಾ.ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಸಂಗೀತ ಸಂಜೆ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯಲಿವೆ.
ಇಂದು ಬೆಳಗ್ಗೆ ಡಾ.ರಾಜ್ ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿರುವ ಸ್ಮಾರಕಕ್ಕೆ ಆಗಮಿಸಿ, ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಮತ್ತು ಡಾ.ರಾಜ್ ಕುಮಾರ್ ಹೆಣ್ಣು ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಕುಟುಂಸ್ಥರು ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.