ಇಂದಿನ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಅನ್ನೋದನ್ನೇ ಹೇಳುತ್ತಿದೆ: ಶಾಸಕ ಮುನಿರತ್ನ

0
Spread the love

ಬೆಂಗಳೂರು: ಈ ಫಲಿತಾಂಶ ಲೋಕಸಭೆಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ ಎಂದು ಆರ್‌ಆರ್ ನಗರ ಶಾಸಕ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಸ್ಥಾನ ಹಾಗೂ ಮಧ್ಯಪ್ರದೇಶ ಎರಡೂ ದೊಡ್ಡ ರಾಜ್ಯಗಳಲ್ಲಿ ನಮಗೆ ಗೆಲುವು ಸಿಕ್ಕಿದೆ. ಛತ್ತೀಸ್‌ಗಢದಲ್ಲೂ ಬಿಜೆಪಿ ಗೆಲ್ಲುತ್ತದೆ.

ಇಲ್ಲಿನ ಗ್ಯಾರಂಟಿ ತೆಲಂಗಾಣದಲ್ಲಿ ವರ್ಕ್ ಆಗಿದೆ. ನಮ್ಮ ನಿರೀಕ್ಷೆ ತೆಲಂಗಾಣದಲ್ಲಿ ಹುಸಿಯಾಯ್ತು. ಆದರೆ ಉಳಿದ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇಂದಿನ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಅನ್ನೋದನ್ನೇ ಹೇಳುತ್ತಿದೆ. ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಇಂದು ಬಿಜೆಪಿಗೆ ಒಳ್ಳೆಯ ದಿನ ಎಂದರು. 

 


Spread the love

LEAVE A REPLY

Please enter your comment!
Please enter your name here