ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಮಣ್ಣು ತುಂಬಿದ ಟ್ರ್ಯಾಕ್ಟರ್ ಹರಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್ (5) ಮೃತ ಮಗುವಾಗಿದ್ದು,
ಮನೆಯ ಮುಂದೆ ವರುಣ್ ಆಟವಾಡುತ್ತಿದ್ದ. ಇದೇ ವೇಳೆ ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಂದಿದ್ದು, ಮಗುವಿನ ಮೇಲೆ ಹಾದು ಹೋಗಿದೆ. ಪರಿಣಾಮ ಮಗು ಸಾವನ್ನಪ್ಪಿದ್ದಾನೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



