ಕೋರ್ಟ್‍ಗೆ ಹಾಜರಾಗದೇ ಕಳ್ಳಾಟ: ಗೋವಾದಲ್ಲಿ ವಕೀಲ ಅರೆಸ್ಟ್!

0
Spread the love

ಬೆಂಗಳೂರು:- ಕೋರ್ಟ್‍ಗೆ ಹಾಜರಾಗದೇ ಕಳ್ಳಾಟ ಆಡಿದ್ದ ವಕೀಲನನ್ನು ಗೋವಾದಲ್ಲಿ ಅರೆಸ್ಟ್ ಮಾಡಲಾಗಿದೆ.

Advertisement

ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಜಗದೀಶ್ ಗೋವಾದಲ್ಲಿ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿ ಕರೆತರುತ್ತಿದ್ದಾರೆ.

ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ ಅವರು ಕೋರ್ಟ್‍ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here