HomeIndia Newsಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅವಘಡ: ಕಾಲ್ತುಳಿತದಿಂದ ಮೂವರು ಸಾವು!

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅವಘಡ: ಕಾಲ್ತುಳಿತದಿಂದ ಮೂವರು ಸಾವು!

For Dai;y Updates Join Our whatsapp Group

Spread the love

ಭುವನೇಶ್ವರ:- ಇಲ್ಲಿನ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ಕಾಲ್ತುಳಿತದಿಂದ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ. ಅಲ್ಲದೇ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ.

ಮೃತರನ್ನು ಪ್ರಭಾತಿ ದಾಸ್, ಬಸಂತಿ ಸಾಹು ಹಾಗೂ ಪ್ರೇಮಕಾಂತ್ ಮೊಹಂತಿ (70) ಎಂದು ಗುರುತಿಸಲಾಗಿದೆ. ಮೂವರೂ ಒಡಿಶಾದ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.

ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಗುಂಡಿಚಾ ದೇವಾಲಯದ ಬಳಿ ಇಂದು ಮುಂಜಾನೆ 4:30ರ ವೇಳೆಗೆ ಕಾಲ್ತುಳಿತ ಸಂಭವಿಸಿದೆ. ರಥಯಾತ್ರೆಯನ್ನು ಕಣ್ತುಂಬಿಕೊಳ್ಳಲು ಭಕ್ತ ಸಮೂಹವೇ ಸೇರಿತ್ತು. ರಥಗಳು ಭಕ್ತರನ್ನು ಸಮೀಪಿಸುತ್ತಿದ್ದಂತೆ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿದು ಬಂದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!