ಮಂಡ್ಯ:- ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ಜರುಗಿದೆ.
ಪ್ರಹ್ಲಾದ್ (21) ಮೃತಪಟ್ಟ ಯುವಕ. ಈತ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ. ಪ್ರಹ್ಲಾದ್ ತನ್ನ ಸ್ನೇಹಿತರೊಂದಿಗೆ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸ ಬಂದಿದ್ದ. ಕಾವೇರಿ ನದಿಯಲ್ಲಿ ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ನುರಿತ ಈಜುಗಾರರ ಸಹಾಯದಿಂದ ಯುವಕನ ಮೃತದೇಹವನ್ನು ಹೊರತೆಗೆಯಲಾಯಿತು.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



