ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ದುರಂತ: ಮರದ ಕೊಂಬೆ ಬಿದ್ದು ಸವಾರ ಗಂಭೀರ!

0
Spread the love

ಬೆಂಗಳೂರು:- ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ. ಗಾಯಗೊಂಡ ಸವಾರನನ್ನು ಅಕ್ಷಯ್‌ ಎಂದು ಗುರುತಿಸಲಾಗಿದೆ. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪ್ರಶಾಂತ್‌ ನೆಲಕ್ಕೆ ಬಿದ್ದಿದ್ದಾರೆ.

Advertisement

ಕೂಡಲೇ ಸ್ಥಳೀಯರು ಪ್ರಶಾಂತ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದ ಅಕ್ಷಯ್ ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿದೆ. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿದೆ. ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್‌ ರಾಜಾಜಿನಗರದಲ್ಲಿ ಕಂಪನಿಯೊಂದದರಲ್ಲಿ ಹೆಚ್ ಆರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here