ನೀರು ಹಿಡಿಯಲು ಹೋಗಿ ದುರಂತ: ಕರೆಂಟ್ ಹೊಡೆದು ಮಹಿಳೆ ಸಾವು- ಸ್ಥಳೀಯರಿಂದ ಪ್ರತಿಭಟನೆ!

0
Spread the love

ಬೆಂಗಳೂರು:- ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ಜರುಗಿದೆ.

Advertisement

ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್ ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನಿಡಲಾಗಿದೆ. ಈ ವೇಳೆ ನೀರು ಹಿಡಿಯಲು ಹೋದ ಮಹಿಳೆಗೆ ಮೋಟರ್ ಸ್ಟಾರ್ಟ್ ಮಾಡುವ ಕರೆಂಟ್ ತಗುಲಿ ಸಾವನ್ನಪ್ಪಿದ್ದಾರೆ.

ಘಟನೆ ಹಿನ್ನೆಲೆ ರೊಚ್ಚಿಗೆದ್ದ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರ ಜೊತೆಗೆ ಜನರು ವಾಗ್ವಾದಕ್ಕಿಳಿದಿದ್ದಾರೆ. ನಮ್ಮ ಮನೆಗೆ ನೀರು ಸಿಗೋವರೆಗೆ ರಸ್ತೆ ತಡೆ ನಿಲ್ಲಿಸಲ್ಲ. ನೀರು ಹಿಡಿಯಲು ಹೋಗಿ ಒಂದು ಜೀವ ಹೋಗಿದೆ ಎಂದು ಆಕ್ರೋಶ ಹೊರ ಹಾಕಿದರು.


Spread the love

LEAVE A REPLY

Please enter your comment!
Please enter your name here