ಯುವಕನ ದುರಂತ ಅಂತ್ಯ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕುಸಿದು ಬಿದ್ದು ಸಾವು!

0
Spread the love

ರಾಯಚೂರು:- ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆಗೆ ಡ್ಯಾನ್ಸ್ ಮಾಡುತ್ತಿರುವಾಗಲೇ ಕುಸಿದು ಯುವಕ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ಜರುಗಿದೆ.

Advertisement

ಮಂಗಳವಾರ ಪೇಟೆಯ ಯುವಕ ಅಭಿಷೇಕ್ (24) ಮೃತ ಯುವಕ. ಆಗಸ್ಟ್ 31ರ ರಾತ್ರಿಯಿಡಿ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ಸೆಪ್ಟೆಂಬರ್ 1 ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್ ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ‌ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ.

ಇಂಥದ್ದೇ ಘಟನೆಗಳು ರಾಜ್ಯದ ಹಲವೆಡೆ ಸಂಭವಿಸಿದ್ದು, ಆತಂಕ ಮೂಡಿಸಿದೆ.


Spread the love

LEAVE A REPLY

Please enter your comment!
Please enter your name here