ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಲಕ್ಷ್ಮೀಪತಿ ಬಾಲಾಜಿ ನಿರ್ಮಿಸಿ, ನಾಯಕನಾಗಿ ನಟಿಸಿರುವ 2ನೇ ಚಿತ್ರ `ಮಾವುತ’ದ ಟ್ರೇಲರ್ ಬಿಡುಗಡೆ ಸಮಾರಂಭ ರೇಣುಕಾಂಬ ಸ್ಟುಡಿಯೋದಲ್ಲಿ ನೆರವೇರಿತು.
ಡಿ.ಸಿ.ಪಿ (ದೆಹಲಿ) ಶಂಕರ್ ಬಿ, ಬಿ.ಜೆ.ಪಿ ಮುಖಂಡರಾದ ಕವಿತಾ ಸಿಂಗ್, ನಿವೃತ್ತ ಪೊಲೀಸ್ ಅಧಿಕಾರಿ ನಂಜುಂಡಸ್ವಾಮಿ, ಸಮಾಜ ಸೇವಕರಾದ ಭಜರಂಗಿ ಉಮೇಶ್ ಮುಂತಾದವರು ಅತಿಥಿಗಳಾಗಿ ಆಗಮಿಸಿದ್ದರು. `ಮಾವುತ’ ಕಾಡಿನಲ್ಲಿ ನಡೆಯುವ ಕೆಲವು ಅಕ್ರಮಗಳನ್ನು ಪತ್ತೆ ಮಾಡಿ, ಕಾಡನ್ನು ಉಳಿಸಿಕೊಳ್ಳುವ ಮಾವುತ ಹಾಗೂ ಆನೆಯ ಕಥೆಯಾಗಿದೆ. ಲಕ್ಷ್ಮೀಪತಿ ಬಾಲಾಜಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ ಎಂದು ನಿರ್ದೇಶಕ ರವಿಶಂಕರ್ ನಾಗ್ ತಿಳಿಸಿದರು.
ನಾಯಕಿಯರಾದ ಮಹಾಲಕ್ಷ್ಮಿ, ದಿವ್ಯಶ್ರೀ, ನಟರಾದ ಲಯ ಕೋಕಿಲ, ಕೈಲಾಶ್ ಕುಟ್ಟಪ್ಪ, ಹಿನ್ನೆಲೆ ಸಂಗೀತ ನೀಡಿರುವ ರವಿವರ್ಮ ಹಾಗೂ ಸಿರಿ ಮ್ಯೂಸಿಕ್ನ ಚಿಕ್ಕಣ್ಣ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
ಸಹ ನಿರ್ಮಾಪಕರಾಗಿ ಮುರುಳಿಧರ ತಿಪ್ಪೂರು, ಚಲುವರಾಜ್ ಎನ್ ಅವರು ಸಾಥ್ ಕೊಟ್ಟಿದ್ದಾರೆ. ರವಿಶಂಕರ್ ನಾಗ್ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಛಾಯಾಗ್ರಹಣ ವೀನಸ್ ಮೂರ್ತಿ, ವಿನು ಮನಸು ಸಂಗೀತ, ರವಿವರ್ಮ ಹಿನ್ನೆಲೆ ಸಂಗೀತ, ವೆಂಕಿ ಯುಡಿವಿ ಸಂಕಲನ, ಕಮಲ್ ಗೋಯಲ್ ಡಿಐ, ಅಕ್ಷಯ ಅವರ ಸಿಜಿ ಕಾರ್ಯ, ಥ್ರಿಲ್ಲರ್ ಮಂಜು ಸಾಹಸ, ಪಿಆರ್ಓ ಸುಧೀಂದ್ರ ವೆಂಕಟೇಶ, ಡಾ. ಪ್ರಭು ಗಂಜಿಹಾಳ, ಡಾ. ವೀರೇಶ ಹಂಡಿಗಿ ಅವರಾಗಿದ್ದಾರೆ. ತಾರಾಬಳಗದಲ್ಲಿ ಲಕ್ಷ್ಮೀಪತಿ ಬಾಲಾಜಿ, ಮಹಾಲಕ್ಷ್ಮಿ, ದಿವ್ಯಶ್ರೀ, ಥ್ರಿಲ್ಲರ್ ಮಂಜು, ಪದ್ಮಾ ವಾಸಂತಿ, ಬಲರಾಜ್ವಾಡಿ, ಲಯ ಕೋಕಿಲ, ನಂಜು ಸಿದ್ದಪ್ಪ, ಕೈಲಾಶ್ ಕುಟ್ಟಪ್ಪ, ಮೈಸೂರು ಸುಂದರ್, ಮೈಸೂರು ಮಂಜುಳ ಮೊದಲಾದವರು ಅಭಿನಯಿಸಿದ್ದಾರೆ.
ಸಾಗರ್ ಎಂಬ ಆನೆ ಚಿತ್ರದಲ್ಲಿ ಅಮೋಘವಾಗಿ ಅಭಿನಯಿಸಿದೆ. ಅನೇಕ ಬಾರಿ ಅಂಬಾರಿ ಹೊತ್ತು, ಈಗ ನಮ್ಮೊಡನೆ ಇರದ ಅರ್ಜುನನೇ ಸ್ಫೂರ್ತಿ. ನಮ್ಮ ಈ ಚಿತ್ರ ಅರ್ಜುನನಿಗೆ ಅರ್ಪಣೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದರು ಲಕ್ಷ್ಮೀಪತಿ ಬಾಲಾಜಿ. ಸಾಹಸ ಸಂಯೋಜನೆಯ ಜೊತೆಗೆ ಪ್ರಮುಖ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ ಎಂದು ಥ್ರಿಲ್ಲರ್ ಮಂಜು ತಿಳಿಸಿದರು.



