ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಸಾರಿಗೆ ಬಸ್:‌ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

0
Spread the love

ಬೀದರ್‌: ರಸ್ತೆಯಲ್ಲಿ ಸಂಚಾರಿಸುವಾಗ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಧಗಧಗನೇ ಹೊತ್ತುರಿದ ಘಟನೆ ಬೀದರ ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಸಮೀಪದ ಕಪ್ಪಿಕೆರೆ ಗ್ರಾಮ ಕ್ರಾಸ್ ಬಳಿ ಈ ಅವಘಡ ನಡೆದಿದೆ.

Advertisement

ಬೀದರ್ ದಿಂದ ಔರಾದಗೆ ತೆರಳುತ್ತಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು, ತಕ್ಷಣವೇ ಧಗ ಧಗನೇ ಹೊತ್ತು ಉರಿದಿದೆ. ಇನ್ನೂ 25 ಜನ  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್ ಡ್ರೈವರ್ ಹಾಗೂ ಕಂಡಕ್ಟರ ತಕ್ಷಣವೇ ಎಚ್ಚೆತು ಎಲ್ಲಾ ಪ್ರಯಾಣಿಕರಿಗೆ ಕೆಳಗಿಳಿಸಿ ಭಾರೀ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here